ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಮತ್ತಷ್ಟು ಸ್ಫೋಟಕ ಮಾಹಿತಿ ಶೀಘ್ರವೇ ಬಹಿರಂಗ: ಯಡಿಯೂರಪ್ಪ ಬೆದರಿಕೆ

ಪಕ್ಷದ ಹೈ ಕಮಾಂಡ್ ಗೆ ಕಿಕ್ ಬ್ಯಾಕ್ ನೀಡಿರುವವರ ಹಲವು ಹೆಸರುಗಳು ಮಾಧ್ಯಮಗಳಿಗೆ ಡೈರಿಯಿಂದ ಬಹಿರಂಗ ಗೊಂಡ ನಂತರ, ಸಿಎಂ ಸಿದ್ದರಾಮಯ್ಯ ವಿರುದ್ಧ ...

ಬೆಂಗಳೂರು: ಪಕ್ಷದ ಹೈ ಕಮಾಂಡ್ ಗೆ ಕಿಕ್ ಬ್ಯಾಕ್ ನೀಡಿರುವವರ ಹಲವು ಹೆಸರುಗಳು ಮಾಧ್ಯಮಗಳಿಗೆ ಡೈರಿಯಿಂದ ಬಹಿರಂಗ ಗೊಂಡ ನಂತರ, ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ ಪಡಿಸುವುದಾಗಿ ಬಿ.ಎಸ್ ಯಡಿಯೂರಪ್ಪ ಬೆದರಿಕೆ ಹಾಕಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಯಡಿಯೂರಪ್ಪ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು, ಜೊತೆಗೆ ವಿಧಾನಸಭೆ ವಿಸರ್ಜಿಸಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಮತ್ತೆ ಚುನಾವಣೆಗೆ ತೆರಳಿ ತಮ್ಮ ನೈತಿಕ ಆದರ್ಶಗಳಿಂದ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಜನಾದೇಶ ಪಡೆಯಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ಮೂರು ನಾಲ್ಕು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮತ್ತಷ್ಟು ರಹಸ್ಯಗಳನ್ನು ಬಹಿರಂಗ ಪಡಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ನೀಡಿರುವ ವಿಷಯವನ್ನು ನಾನು ಬಹಿರಂಗ ಪಡಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಟೀಕಿಸಿದರು. ಆದರೆ ಡೈರಿಯಲ್ಲಿ ನೀಡಿರುವ ಹಣದ ಬಗ್ಗೆ ಉಲ್ಲೇಖ ಇರುವುದರಿಂದ ಅವರೆಲ್ಲಾ ಸತ್ಯ ಒಪ್ಪಿಕೊಳ್ಳೂಬೇಕಾದ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನು ಲೂಟಿ ಮಾಡಿವ ಎಂದು ಆರೋಪಿಸಿದ್ದಾರೆ.

ಬಿಜೆಪಿ ಅವರು ಏನೂ ಕಡಿಮೆಯಿಲ್ಲ ಅವರು ಕೂಡ ತಮ್ಮನ ಪಕ್ಷದ ಹೈಕಮಾಂಡ್ ಗೆ ಕಪ್ಪ ನೀಡುತ್ತಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT