ಬಿಜೆಪಿ ಸೇರಿದ ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಬಿಜೆಪಿ ಸೇರ್ಪಡೆ ನನ್ನ ಪ್ರತಿಷ್ಠೆ ಹೆಚ್ಚಿಸಿದೆ: ಶ್ರೀನಿವಾಸ್ ಪ್ರಸಾದ್

ಸಾರ್ವಜನಿಕರ ಸೇವೆ ಮುಂದುವರಿಸಲು ನಾನು ಬಿಜೆಪಿ ಸೇರಿದೆ,ಇದರಿಂದ ನನ್ನ ಪ್ರತಿಷ್ಠೆ ಹೆಚ್ಚಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ...

ಬೆಂಗಳೂರು: ಸಾರ್ವಜನಿಕರ ಸೇವೆ ಮುಂದುವರಿಸಲು ನಾನು ಬಿಜೆಪಿ ಸೇರಿದೆ,ಇದರಿಂದ ನನ್ನ ಪ್ರತಿಷ್ಠೆ ಹೆಚ್ಚಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದ ನಂತರ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನನ್ನನ್ನು ಸಂಪುಟದಿಂದ ಕೈಬಿಟ್ಟದ್ದರಿಂದ ನನ್ನ ಪ್ರತಿಷ್ಠೆಗೆ ಪೆಟ್ಟು ಬಿತ್ತು  ಎಂದು ಆರೋಪಿಸಿದರು. ನಾನು ಆರಂಭದಿಂದಲೂ ನನ್ನ ಆತ್ಮ ಗೌರವಕ್ಕೆ ಧಕ್ಕೆ ಯಾಗದಂತೆ, ಅದರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಗೌರವವಯುತ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ,  ಆದರೆ ಸಿದ್ದರಾಮಯ್ಯ ನನ್ನ ಆತ್ಮಗೌರವಕ್ಕೆ ಮತ್ತು ಪ್ರತಿಷ್ಠೆಗೆ ಧಕ್ಕೆ ತಂದರು, ಅದನ್ನು ನನಗೆ ಸಹಿಸಿಕೊಳ್ಳಲಾಗಲಿಲ್ಲ, ಹೀಗಾಗಿ ನಾನು ಕಾಂಗ್ರೆಸ್ ತೊರೆದೆ ಎಂದು ತಿಳಿಸಿದರು.

ತಾವು ಬಿಜೆಪಿ ಸೇರಿದ್ದನ್ನು ಸಮರ್ಥಿಸಿಕೊಂಡ ಶ್ರೀನಿವಾಸ್ ಪ್ರಸಾದ್ ಬಿಜೆಪಿ ದಲಿತ ವಿರೋಧಿ ಪಕ್ಷವಲ್ಲ, ದೇಶದ ಜನರ ಆದೇಶಾಜ್ಞೆಯಂತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿದೆ. ಇದಕ್ಕೂ ಮೊದಲು ರಾಜ್ಯದಲ್ಲೂ ಬಿಜೆಪಿ ಜನಾದೇಶ ಪಡೆದು ಸರ್ಕಾರ ರಚಿಸಿತ್ತು, ದಲಿತರು ಹಾಗೂ ಹಿಂದುಳಿದ ವರ್ಗದವರ ಸಹಾಯವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಿಲ್ಲ, ಮೋದಿ ಅವರ ಸರ್ಕಾರದ ಕಾರ್ಯವೈಖರಿ, ಸಾಮಾಜಿಕ ಬದ್ಧತೆ ನನಗೆ ಬಿಜೆಪಿ ಸೇರಲು ಪ್ರೇರಣೆ ನೀಡಿತು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ