ಬಿಜೆಪಿ ಸೇರಿದ ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಬಿಜೆಪಿ ಸೇರ್ಪಡೆ ನನ್ನ ಪ್ರತಿಷ್ಠೆ ಹೆಚ್ಚಿಸಿದೆ: ಶ್ರೀನಿವಾಸ್ ಪ್ರಸಾದ್

ಸಾರ್ವಜನಿಕರ ಸೇವೆ ಮುಂದುವರಿಸಲು ನಾನು ಬಿಜೆಪಿ ಸೇರಿದೆ,ಇದರಿಂದ ನನ್ನ ಪ್ರತಿಷ್ಠೆ ಹೆಚ್ಚಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ...

ಬೆಂಗಳೂರು: ಸಾರ್ವಜನಿಕರ ಸೇವೆ ಮುಂದುವರಿಸಲು ನಾನು ಬಿಜೆಪಿ ಸೇರಿದೆ,ಇದರಿಂದ ನನ್ನ ಪ್ರತಿಷ್ಠೆ ಹೆಚ್ಚಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದ ನಂತರ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನನ್ನನ್ನು ಸಂಪುಟದಿಂದ ಕೈಬಿಟ್ಟದ್ದರಿಂದ ನನ್ನ ಪ್ರತಿಷ್ಠೆಗೆ ಪೆಟ್ಟು ಬಿತ್ತು  ಎಂದು ಆರೋಪಿಸಿದರು. ನಾನು ಆರಂಭದಿಂದಲೂ ನನ್ನ ಆತ್ಮ ಗೌರವಕ್ಕೆ ಧಕ್ಕೆ ಯಾಗದಂತೆ, ಅದರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಗೌರವವಯುತ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ,  ಆದರೆ ಸಿದ್ದರಾಮಯ್ಯ ನನ್ನ ಆತ್ಮಗೌರವಕ್ಕೆ ಮತ್ತು ಪ್ರತಿಷ್ಠೆಗೆ ಧಕ್ಕೆ ತಂದರು, ಅದನ್ನು ನನಗೆ ಸಹಿಸಿಕೊಳ್ಳಲಾಗಲಿಲ್ಲ, ಹೀಗಾಗಿ ನಾನು ಕಾಂಗ್ರೆಸ್ ತೊರೆದೆ ಎಂದು ತಿಳಿಸಿದರು.

ತಾವು ಬಿಜೆಪಿ ಸೇರಿದ್ದನ್ನು ಸಮರ್ಥಿಸಿಕೊಂಡ ಶ್ರೀನಿವಾಸ್ ಪ್ರಸಾದ್ ಬಿಜೆಪಿ ದಲಿತ ವಿರೋಧಿ ಪಕ್ಷವಲ್ಲ, ದೇಶದ ಜನರ ಆದೇಶಾಜ್ಞೆಯಂತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿದೆ. ಇದಕ್ಕೂ ಮೊದಲು ರಾಜ್ಯದಲ್ಲೂ ಬಿಜೆಪಿ ಜನಾದೇಶ ಪಡೆದು ಸರ್ಕಾರ ರಚಿಸಿತ್ತು, ದಲಿತರು ಹಾಗೂ ಹಿಂದುಳಿದ ವರ್ಗದವರ ಸಹಾಯವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಿಲ್ಲ, ಮೋದಿ ಅವರ ಸರ್ಕಾರದ ಕಾರ್ಯವೈಖರಿ, ಸಾಮಾಜಿಕ ಬದ್ಧತೆ ನನಗೆ ಬಿಜೆಪಿ ಸೇರಲು ಪ್ರೇರಣೆ ನೀಡಿತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT