ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಈ ಜನ್ಮದಲ್ಲಿ ರಾಯಣ್ಣ ಬ್ರಿಗೇಡ್‌ ಒಪ್ಪಿಕೊಳ್ಳಲ್ಲ: ಈಶ್ವರಪ್ಪ ವಿರುದ್ಧ ಬಿಎಸ್‌ವೈ ಮತ್ತೆ ಗರಂ

ರಾಯಣ್ಣ ಬ್ರಿಗೇಡ್ ಗೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ವಿರದ್ಧ ಭಾನುವಾರ ಮತ್ತೆ ಆಕ್ರೋಶ...

ಕಲಬುರಗಿ: ರಾಯಣ್ಣ ಬ್ರಿಗೇಡ್ ಗೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ವಿರದ್ಧ ಭಾನುವಾರ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು  ಈ ಜನ್ಮದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಕಾರಿಣಿಯ 2 ನೇ ದಿನವಾದ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾನು ಯಾವುದೇ ಕಾರಣಕ್ಕೂ ಬ್ರಿಗೇಡ್‌ ಚಟುವಟಿಕೆಗಳನ್ನು ಒಪ್ಪುವುದಿಲ್ಲ. ಬ್ರಿಗೇಡ್‌ ಚಟುವಟಿಕೆಗೆ ಅವಕಾಶ ನೀಡಿದರೆ  ತಪ್ಪು ಸಂದೇಶರವಾನೆಯಾಗುತ್ತದೆ. ಹೀಗಾಗಿ ಈಶ್ವರಪ್ಪ ಅವರು ಸಹ ಬ್ರಿಗೇಡ್ ಸಭೆಗೆ ಹೋಗುವುದು ಸರಿಯಲ್ಲ. ಈ ಎಲ್ಲಾ ವಿಚಾರವನ್ನು ನಾನು ಪಕ್ಷದ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಅವರ ಗಮನಕ್ಕೆ ತಂದಿದ್ದು, ಪಕ್ಷದ ಚಟುವಟಿಕೆಗೆ ಧಕ್ಕೆ ತಂದೆರೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಮುರಳಿಧರ್ ರಾವ್‌ ಅವರು ಎಲ್ಲವನ್ನೂ ಈಶ್ವರಪ್ಪ ಅವರಿಗೆ ಮನವರಿಕೆ ಮಾಡಿದ್ದಾರೆ. ಬದಲಾಯಿಸಿಕೊಳ್ಳಿ, ಕಾರ್ಯಕಾರಿಣಿ ನಡೆಯುವ ವೇಳೆ ಈಶ್ವರಪ್ಪ ಅವರು ಇಲ್ಲಿಲ್ಲದೇ ಬೇರೆಲ್ಲೋ ಬ್ರಿಗೇಡ್‌ ಹೆಸರಿನಲ್ಲಿ ಭಾಗವಹಿಸುವುದು ಸರಿಯಲ್ಲ ಬಿಎಸ್ ವೈ ಹೇಳಿದ್ದಾರೆ.
ಇನ್ನು ಬಿಎಸ್ ವೈಗೆ ಸೆಡ್ಡು ಹೊಡೆದಿರುವ ಈಶ್ವರಪ್ಪ ಅವರು ಜನವರಿ 26ರಂದು ಕೂಡಲ ಸಂಗಮದಲ್ಲಿ ನಡೆಯುವ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೆ ಹೋಗುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

SCROLL FOR NEXT