ರಾಜಕೀಯ

ಕೋವಿಂದ್ ಭೇಟಿಗೆ ನಿರಾಕರಣೆ: ಕೋಲಿ ಜನಾಂಗದ ಮುಖಂಡರಿಂದ ಅರಂವಿಂದ್ ಲಿಂಬಾವಳಿಗೆ ಮುತ್ತಿಗೆ

Lingaraj Badiger
ಬೆಂಗಳೂರು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಕೋಲಿ ಸಮಾಜದ ಮುಖಂಡರು ಮುತ್ತಿಗೆ ಹಾಕಿದ ಘಟನೆ ಬುಧವಾರ ಬೆಂಗಳೂರಿನ ಏಟ್ರಿಯಾ ಹೋಟೆಲ್ ನಲ್ಲಿ ನಡೆದಿದೆ.
ಎನ್ ಡಿಎ ರಾಷ್ಟ್ರಪತಿ ಅಭ್ಯರ್ತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದು, ಏಟ್ರಿಯಾ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ಈ ವೇಳೆ ವೇಳೆ ರಾಮನಾಥ್ ಕೋವಿಂದ್ ಅವರಿಗೆ ಹೂಗುಚ್ಛ ನೀಡಲು ಅವಕಾಶ ನೀಡುವಂತೆ ಕೋಲಿ ಸಮಾಜದ ಮುಖಂಡರು ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ಅರವಿಂದ್ ಲಿಂಬಾವಳಿ ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಿ ಸಮಾಜದ ಮುಖಂಡರು ಬಿಜೆಪಿ ಶಾಸಕನಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿನಿಸಿದರು. ಆದರೆ ತಕ್ಷಣ ಅರವಿಂದ್ ಲಿಂಬಾವಳಿ ನೆರವಿಗೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
SCROLL FOR NEXT