ರಾಹುಲ್ ಗಾಂಧಿ ಮತ್ತು ಶೋಭಾ ಕರಂದ್ಲಾಜೆ 
ರಾಜಕೀಯ

ರಾಹುಲ್‌ ಗಾಂಧಿ ಒಬ್ಬ ಬಚ್ಚಾ, ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಶೋಭಾ ಕರಂದ್ಲಾಜೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬಚ್ಚಾ, ಅವರಿಗೆ ದೇಶದ ಪ್ರಧಾನಿ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ...

ಕಲಬುರಗಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬಚ್ಚಾ, ಅವರಿಗೆ ದೇಶದ ಪ್ರಧಾನಿ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕಿಲ್ಲ, ಅವರಿಂದ ಪ್ರಧಾನಿ ಅವರು ಕಲಿಯುವುದು ಏನು ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ನಿನ್ನೆ ರಾಹುಲ್ ಗಾಂಧಿ ಅವರು ಮೋದಿ ಒಬ್ಬ ದುರ್ಬಲ ಪ್ರಧಾನಿ ಎಂದು ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯಿಂದ ಇಡೀ ಪ್ರಪಂಚವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ಅವರ ಬಗ್ಗೆ ರಾಹುಲ್‌ ಗಾಂಧಿಯಂತಹ ಒಬ್ಬ ಬಚ್ಚಾ ಗೆ ಟೀಕಿಸುವ ಹಕ್ಕಿಲ್ಲ ಎಂದು ಕಿಡಿಕಾರಿದ್ದಾರೆ. ಮೊದಲು ಸಿದ್ದರಾಮಯ್ಯ ಅವರ ಜೊತೆ ಮಾತನಾಡಿ ರಾಜ್ಯದ ರೈತರ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದಲ್ಲಿ ಹೇಗೆ ಸ್ವಾಗತಿಸಿ ಗೌರವ ನೀಡಲಾಯಿತು ಎನ್ನುವುದನ್ನು ವಿಶ್ವವೇ ನೋಡಿದೆ. ಅವರು 70 ವರ್ಷಗಳಲ್ಲಿ ಇಸ್ರೇಲ್‌ ಪ್ರವಾಸ ಮಾಡುವ ಎದೆಗಾರಿಕೆ ತೋರಿಸಿದ್ದಾರೆ.  ಗಡಿ ರಕ್ಷಣೆ, ಸಶಸ್ತ್ರ ಸ್ವಾವಲಂಬನೆ ಮಾಡುವತ್ತ ಹೊರಟಿದ್ದಾರೆ ಎಂದು ಮೋದಿಯನ್ನು ಶ್ಲಾಘಿಸಿದ ಶೋಭಾ, ಮೊದಲು  ಕಾಂಗ್ರೆಸ್ ಪಕ್ಷದಲ್ಲಿರುವ ಹುಳುಕನ್ನು ಸರಿಪಡಿಸಲಿ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT