ಡಾ. ಯತೀಂದ್ರ 
ರಾಜಕೀಯ

ಸಿಎಂ ಪುತ್ರನ ರಾಜಕೀಯ ಪ್ರವೇಶ ಬಹುತೇಕ ಖಚಿತ: ಯತೀಂದ್ರಗೆ ಕಾಂಗ್ರೆಸ್ ಸದಸ್ಯತ್ವ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಇತ್ತೀಚೆಗೆ ಕಾಂಗ್ರೆಸ್‌ ಸೇರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಆ ಮೂಲಕ ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅವರ ಸಕ್ರಿಯ ರಾಜಕೀಯ ಪ್ರವೇಶ ಖಚಿತಗೊಂಡಿದೆ.
ಯತೀಂದ್ರ ಎರಡು ತಿಂಗಳ ಹಿಂದೆಯೇ ಪಕ್ಷದ ಸದಸ್ಯತ್ವ ತೆಗೆದುಕೊಂಡಿದ್ದಾರೆ. ಆದರೆ, ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಿಲ್ಲ ಎಂದು ಮೈಸೂರು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ. ವಿಜಯಕುಮಾರ್‌ ತಿಳಿಸಿದ್ದಾರೆ. ಈ ವಿಷಯವನ್ನು ರಾಜ್ಯ ಕಾಂಗ್ರೆಸ್‌ ಘಟಕ ರಹಸ್ಯವಾಗಿ ಇಟ್ಟಿದೆ.
ಈ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷರಾಗಿ 2 ತಿಂಗಳ ಹಿಂದೆ ಸರ್ಕಾರ ನೇಮಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT