ದಿನೇಶ್ ಗುಂಡುರಾವ್ ಹಾಗೂ ಪತ್ನಿ ಟಬು ರಾವ್ ಮತ್ತು ಶೋಭಾ ಕರಂದ್ಲಾಜೆ 
ರಾಜಕೀಯ

ಮದುವೆ ಸಂಬಂಧದ ಹೇಳಿಕೆ: ಶೋಭಾ ಕರಂದ್ಲಾಜೆಗೆ ದಿನೇಶ್ ಗುಂಡೂರಾವ್ ಖಡಕ್ ಉತ್ತರ

ಸಂಸದೆ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಡುವಿನ ವಾಕ್ಸಮರ ತಾರಕಕ್ಕೇರಿದೆ, ...

ಬೆಂಗಳೂರು: ಸಂಸದೆ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಡುವಿನ ವಾಕ್ಸಮರ ತಾರಕಕ್ಕೇರಿದೆ, ಇಬ್ಬರು ಪರಸ್ಪರ ವಯಕ್ತಿಕ ವಿಚಾರಗಳ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.
ದಲಿತರ ಮನೆಯಲ್ಲಿ ಊಟ ಮಾಡಿದರೇ ಸಾಲದು, ದಲಿತ ಯುವತಿಯನ್ನು ತಮ್ಮ ಕುಟುಂಬದ ಸದಸ್ಯರಿಗೆ ವಿವಾಹ ಮಾಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಕಾರ್ಯಾಕಾರಿ ಅಧ್ಯಕ್ಷರ ಪತ್ನಿ ದಲಿತರೆ? ಕಾಂಗ್ರೆಸ್ ಕಾರ್ಯಾಧ್ಯಕ್ಷರು ಯಾರನ್ನು ಮದುವೆ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಅಲ್ಲವೇ
ಎಂದು ಪ್ರಶ್ನಿಸಿದ್ದರು. 
ಇದಕ್ಕೆ ಖಡಕ್ ಉತ್ತರ ನೀಡಿರುವ  ದಿನೇಶ್, ನಾನು ಯಾರನ್ನು ಮದುವೆಯಾಗಿದ್ದೇನೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅದರಿಂದ ಸಮಾಜಕ್ಕೆ ಯಾವುದೇ ತಪ್ಪು ಸಂದೇಶ ಹೋಗಿಲ್ಲ, ಒಂದು ವೇಳೆ ನಾನು ದಲಿತ ಹುಡುಗಿಯನ್ನು ಇಷ್ಟಪಟ್ಟಿದ್ದರೇ,ದಲಿತ ಯುವತಿಯನ್ನೇ ವಿವಾಹವಾಗುತ್ತಿದ್ದೆ. ನಾನು ಯಾರನ್ನು ವಿವಾಹವಾಗಿದ್ದೇನೆ ಎಂಬ ಬಗ್ಗೆ ಶೋಭಾ ಯಾಕೆ ಚಿಂತೆ ಮಾಡುತ್ತಿದ್ದಾರೋ ತಿಳಿಯದು, ಕುಮಾರಿ ಶೋಭಾ ಕರಂದ್ಲಾಜೆಯಂಥ ನಾಯಕಿಯ ನಿಲುವು ಇಂತಹ ಮಟ್ಟಕ್ಕೆ ಇಳಿದಿರುವುದು ನಿಜವಾಗಿಯು ದುರಾದೃಷ್ಟಕರ, ಅವರು ಮದುವೆಯಾಗರದಿರುವುದರಿಂದ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಇನ್ನೂ ಬಿಜೆಪಿ ನಾಯಕಿ ಶೋಭಾ ಕರದ್ಲಾಜೆ ಪ್ರಶ್ನೆಗೆ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ತಮ್ಮ ಫೇಸ್'ಬುಕ್ ಪುಟದಲ್ಲಿ ತಿರುಗೇಟು ನೀಡಿದ್ದಾರೆ. 'ನಾನು ಮುಸ್ಲಿಂ ಜನಾಂಗದಲ್ಲಿ ಜನಿಸಿರುವುದು ಹಾಗೂ ನನ್ನ ಪತಿ ದಿನೇಶ್ ಗುಂಡೂರಾವ್ ಅವರು ಬ್ರಾಹ್ಮಣರು ಎಂಬುದು ಗೋಪ್ಯವಾದ ವಿಷಯವೇನಲ್ಲ. ನಾವು ವಿವಾಹವಾದ 2 ದಶಕದಿಂದ ಸಂತೋಷದಿದ್ದೇವೆ. ಗೃಹಿಣಿಯಾಗಿ ಹಾಗೂ  ಎರಡು ಮಕ್ಕಳ ತಾಯಿಯಾಗಿ ಕುಮಾರಿ ಶೋಭಾ ಕರದ್ಲಾಜೆ ಅವರು ತಮ್ಮ ರಾಜಕೀಯ ಲಾಭಗಳಿಗಾಗಿ ನಮ್ಮ ಖಾಸಗಿ ಬದುಕಿನೊಳಗೆ ಪ್ರವೇಶಿಸುವುದನ್ನು ಬಲವಾಗಿ ಖಂಡಿಸುತ್ತೇನೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT