ರಾಜಕೀಯ

ಅರಣ್ಯ ಸಚಿವ ರಮಾನಾಥ ರೈಗೆ ಗೃಹ ಖಾತೆ ಹೊಣೆ?: ಸಿಎಂ ನಿವಾಸದಲ್ಲಿ ಸಮಾಲೋಚನೆ

Shilpa D
ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್‌ ರಾಜೀನಾಮೆಯಿಂದ ತೆರವಾಗಿದ್ದ ಗೃಹ ಖಾತೆಯನ್ನು ಅರಣ್ಯ ಸಚಿವ ರಮಾನಾಥ ರೈ ಅವರಿಗೆ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಸಚಿವ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮ್ಯ ಗೃಹ ಖಾತೆಯ ಜವಾಬ್ದಾರಿ ನೀಡುವ ಕುರಿತಂತೆ ಅವರೊಂದಿಗೆ ಚರ್ಚಿಸಿದರು. ಅಷ್ಟೇ ಅಲ್ಲ ಹೈ ಕಮಾಂಡ್‌ ಸೂಚನೆಯನ್ನೂ ರೈ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ನಡುವೆ ಬಿ.ಸಿ. ರೋಡ್‌ನ‌ಲ್ಲಿ ಕೋಮು ಗಲಭೆ ಸೃಷ್ಟಿಯಾಗಿ ಸ್ವತಂತ್ರ ಗೃಹ ಸಚಿವರು ಇಲ್ಲದಿರುವುದೂ ಕೂಡ ಖಾತೆಯ ವೈಫ‌ಲ್ಯಕ್ಕೆ ಕಾರಣ ವಾಗಿತ್ತು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ ಗೃಹ ಖಾತೆಯ ಜವಾಬ್ದಾರಿನೀಡಲು ಎಲ್ಲ  ಹಿರಿಯ ಸಚಿವರಿಗೂ ಕೋರಿಕೊಂಡಿದ್ದರು. ಆದರೆ, ಬಹುತೇಕ ಸಚಿವರು ಗೃಹ ಇಲಾಖೆ ಜವಾಬ್ದಾರಿ ಹೊರಲು ಹಿಂದೇಟು ಹಾಕಿದ್ದರು.
ಗೃಹ ಖಾತೆಯನ್ನು ವಾರದೊಳಹೆ ವಹಿಸಿಕೊಡಬಹುದು ಅಥವಾ  ಸಂಪುಟ ವಿಸ್ತರಣೆ ವೇಳೆ ಖಾತೆ ಹಂಚಿಕೆ ಮಾಡಬಹುದು, ರಮಾನಾಥ ರೈ ಗೃಹ ಸಚಿವ ಆಗುವುದು ಖಚಿತ ಎಂದು ಮೂಲಗಳು ತಿಳಿಸಿವೆ. 
SCROLL FOR NEXT