ಗುಜರಾತ್ ಶಾಸಕರೊಂದಿಗೆ ಡಿ ಕೆ ಶಿವಕುಮಾರ್ 
ರಾಜಕೀಯ

ಗುಜರಾತ್ ಶಾಸಕರಿಗೆ ಕರ್ನಾಟಕ ದರ್ಶನ ಭಾಗ್ಯ, ಗ್ರೀನ್ ಸಿಗ್ನಲ್ ನೀಡದ 'ಕೈ' ಕಮಾಂಡ್

ಐಷಾರಾಮಿ ರೆಸಾರ್ಟ್ ನಲ್ಲಿ ಕೂತು ಕಾಲ ಕಳೆಯಲು ಬೇಸರ ವ್ಯಕ್ತಪಡಿಸಿರುವ ಬೆಂಗಳೂರು ಹೊರವಲಯದಲ್ಲಿ ವಾಸ್ತವ್ಯ ಹೂಡಿರುವ...

ಬೆಂಗಳೂರು: ಐಷಾರಾಮಿ ರೆಸಾರ್ಟ್ ನಲ್ಲಿ ಕೂತು ಕಾಲ ಕಳೆಯಲು ಬೇಸರ ವ್ಯಕ್ತಪಡಿಸಿರುವ ಬೆಂಗಳೂರು ಹೊರವಲಯದಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಶಾಸಕರನ್ನು ವಿವಿಧ ಪ್ರವಾಸಿ ತಾಣಗಳಿಗೆ ಕರೆದೊಯ್ಯಲು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಹೀಗಾಗಿ ಕರ್ನಾಟಕದ ದರ್ಶನ ಭಾಗ್ಯವನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ.
ಶಾಸಕರನ್ನು ಆಕರ್ಷಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗುಜರಾತ್ ಶಾಸಕರ ಭದ್ರತೆಯನ್ನು ಬಿಗಿಗೊಳಿಸಿದ್ದು, ಮುಂದಿನ ಆದೇಶದವರೆಗೂ ಶಾಸಕರನ್ನು ರೆಸಾರ್ಟ್ ನಿಂದ ಹೊರಗೆ ಕರೆದುಕೊಂಡು ಹೋಗದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ.
ಗುಜಾರಾತ್ ಶಾಸಕರ ಉಸ್ತುವಾರಿ ಹಾಗೂ ಭದ್ರತೆಯ ಹೊಣೆಗಾರಿಕೆ ವಹಿಸಿಕೊಂಡಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ಇಂದು ಬೆಳಗ್ಗೆಯಷ್ಟೆ ರೆಸಾರ್ಟ್ ಗೆ ಭೇಟಿ ನೀಡಿ ಶಾಸಕರೊಂದಿಗೆ ಚರ್ಚಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಧಾರ್ಮಿಕ ಹಾಗೂ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಇಚ್ಛೆ ವ್ಯಕ್ತಪಿಡಿಸಿದ್ದಾರೆ. ಆದರೆ ಇದಕ್ಕೆ ನಮ್ಮ ರಾಷ್ಟ್ರೀಯ ನಾಯಕರ ಅನುಮತಿಗಾಗಿ ಕಾಯುತ್ತಿದ್ದೇವೆ. ಅವರ ಅನುಮತಿ ಇಲ್ಲದೆಯೇ ಶಾಸಕರನ್ನು ಹೊರಗಡೆ ಕಳುಹಿಸುವುದಿಲ್ಲ ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.
ಒಂದು ವೇಳೆ ಶಾಸಕರ ಪ್ರವಾಸಕ್ಕೆ ರಾಷ್ಟ್ರೀಯ ನಾಯಕರು ಅನುಮತಿ ನೀಡಿದರೆ ಶಾಸಕರು ತಮ್ಮ ಸ್ವಂತ ಖರ್ಚಿನಲ್ಲೇ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT