ಗಾಲಿ ಜನಾರ್ದನ ರೆಡ್ಡಿ 
ರಾಜಕೀಯ

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜನಾರ್ದನ ರೆಡ್ಡಿ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ 2018 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ 2018 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ಬಿಜೆಪಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 25 ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅನುಮತಿ ಪಡೆದು ಬಳ್ಳಾರಿಗೆ ಭೇಟಿ ನೀಡಿದ್ದ ಜನಾರ್ದನ ರೆಡ್ಡಿ, ಕನಕ ದುರ್ಗ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಜನಾರ್ದನ ರೆಡ್ಡಿ 2018 ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. 
ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣದಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. 2019 ರಲ್ಲಿಯೂ ಮೋದಿ ನೇತೃತ್ವದ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ, ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ. 
ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದ್ದು, ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ತದನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ-MEA

Census 2027: ಜಾತಿ, ಕೋವಿಡ್ ಲಸಿಕೆ, ಆಧಾರ್‌ ಸೇರಿ 40 ಪ್ರಶ್ನೆಗಳಿಗೆ ಉತ್ತರಿಸಬೇಕು! ಜನಗಣತಿ ವೇಳೆ ಯಾವೆಲ್ಲಾ ಐಡಿಗಳು ಬೇಕು ಗೊತ್ತಾ?

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ