ಕೆ.ಎಸ್ ಈಶ್ವರಪ್ಪ 
ರಾಜಕೀಯ

ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ: ಸಂಘಟನೆಗೆ ಗುಡ್ ಬೈ ಹೇಳಿದ ಈಶ್ವರಪ್ಪ

ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ, ಬಿಜೆಪಿ ಒಬಿಸಿ ಮೋರ್ಚಾ ಮೂಲಕವೇ ದಲಿತರು, ಹಿಂದುಳಿದ ವರ್ಗದ ಜನರನ್ನು...

ಶಿವಮೊಗ್ಗ: ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ, ಬಿಜೆಪಿ ಒಬಿಸಿ ಮೋರ್ಚಾ ಮೂಲಕವೇ ದಲಿತರು, ಹಿಂದುಳಿದ ವರ್ಗದ ಜನರನ್ನು ಸಂಘಟಿಸುವುದಾಗಿ ವಿಧಾನ ಪರಿಷತ್ ನಾಯಕ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಅಮಿತ್ ಷಾ ಕಟ್ಟುನಿಟ್ಟಿನ ಸೂಚನೆ ನೀಡಿದ ಕಾರಣ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿದಿದ್ದೇನೆ. ಬ್ರಿಗೇಡ್‌ ಪದಾಧಿಕಾರಿಗಳು ಬಿಜೆಪಿಗೆ ಸೇರಲು ಪಕ್ಷದ ವರಿಷ್ಠರು ಸಮ್ಮತಿಸಿದ್ದಾರೆ ಎಂದು ಖಚಿತ ಪಡಿಸಿದ್ದಾರೆ.
ರಾಜ್ಯದ ಜನರು, ಪಕ್ಷದ ಕಾರ್ಯಕರ್ತರ ಗೊಂದಲ ನಿವಾರಣೆಗಾಗಿ ಬ್ರಿಗೇಡ್‌ ಚಟುವಟಿಕೆ ಸ್ಥಗಿತಗೊಳಿಸಲು ಒಪ್ಪಿಗೆ ನೀಡಿದ್ದೇನೆ. ಬ್ರಿಗೇಡ್‌ ಮುಖಂಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ನೀಡುವುದಾಗಿ ಅಮಿತ್ ಷಾ ಭರವಸೆ ನೀಡಿದ್ದಾರೆ ಎಂದು ಹೇಳಿದ ಅವರು, ಅಕ್ರಮ ಆಸ್ತಿ ಗಳಿಸಿದ್ದೇನೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯಕ್ಕೆ  ದೂರು ಸಲ್ಲಿಸಿರುವ ವಕೀಲ ವಿನೋದ್  ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ  ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

3 ತಿಂಗಳ ಮುಂಚೆಯೇ ರಾಮ ಮಂದಿರ ಹಣ ಎಣಿಕೆ ಸಿಬ್ಬಂದಿಗಳ ಕಿತ್ತೊಗೆಯಲು SBI ಶಿಫಾರಸ್ಸು ಮಾಡಿತ್ತು: ವರದಿ

ಅವನಿಗೆ ಬದುಕುವ ಹಕ್ಕಿಲ್ಲ: ಎರಡೇ ತಿಂಗಳಲ್ಲಿ ನಸ್ರಾಪುರ ಅಪರಾಧಿಗೆ ಗಲ್ಲು ಶಿಕ್ಷೆ ಸ್ವಾಗತಿಸಿದ ಮಹಾ ಸಿಎಂ ಫಡ್ನವೀಸ್

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

''ನೋರು ಬಾಗುಂಟೆ ಊರು ಬಾಗುಂಟುಂದಿ'' ಸುಳ್ಳು ಕೇಸ್ ವಿರುದ್ಧ ಕಾನೂನು ಹೋರಾಟ, ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ- ಡಾ.ಕೆ. ಸುಧಾಕರ್!