ಕೆ.ಎಸ್ ಈಶ್ವರಪ್ಪ 
ರಾಜಕೀಯ

ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ: ಸಂಘಟನೆಗೆ ಗುಡ್ ಬೈ ಹೇಳಿದ ಈಶ್ವರಪ್ಪ

ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ, ಬಿಜೆಪಿ ಒಬಿಸಿ ಮೋರ್ಚಾ ಮೂಲಕವೇ ದಲಿತರು, ಹಿಂದುಳಿದ ವರ್ಗದ ಜನರನ್ನು...

ಶಿವಮೊಗ್ಗ: ರಾಯಣ್ಣ ಬ್ರಿಗೇಡ್ ಮುಗಿದ ಅಧ್ಯಾಯ, ಬಿಜೆಪಿ ಒಬಿಸಿ ಮೋರ್ಚಾ ಮೂಲಕವೇ ದಲಿತರು, ಹಿಂದುಳಿದ ವರ್ಗದ ಜನರನ್ನು ಸಂಘಟಿಸುವುದಾಗಿ ವಿಧಾನ ಪರಿಷತ್ ನಾಯಕ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಅಮಿತ್ ಷಾ ಕಟ್ಟುನಿಟ್ಟಿನ ಸೂಚನೆ ನೀಡಿದ ಕಾರಣ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿದಿದ್ದೇನೆ. ಬ್ರಿಗೇಡ್‌ ಪದಾಧಿಕಾರಿಗಳು ಬಿಜೆಪಿಗೆ ಸೇರಲು ಪಕ್ಷದ ವರಿಷ್ಠರು ಸಮ್ಮತಿಸಿದ್ದಾರೆ ಎಂದು ಖಚಿತ ಪಡಿಸಿದ್ದಾರೆ.
ರಾಜ್ಯದ ಜನರು, ಪಕ್ಷದ ಕಾರ್ಯಕರ್ತರ ಗೊಂದಲ ನಿವಾರಣೆಗಾಗಿ ಬ್ರಿಗೇಡ್‌ ಚಟುವಟಿಕೆ ಸ್ಥಗಿತಗೊಳಿಸಲು ಒಪ್ಪಿಗೆ ನೀಡಿದ್ದೇನೆ. ಬ್ರಿಗೇಡ್‌ ಮುಖಂಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ನೀಡುವುದಾಗಿ ಅಮಿತ್ ಷಾ ಭರವಸೆ ನೀಡಿದ್ದಾರೆ ಎಂದು ಹೇಳಿದ ಅವರು, ಅಕ್ರಮ ಆಸ್ತಿ ಗಳಿಸಿದ್ದೇನೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯಕ್ಕೆ  ದೂರು ಸಲ್ಲಿಸಿರುವ ವಕೀಲ ವಿನೋದ್  ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ  ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT