ವಿಧಾನಸಭೆ 
ರಾಜಕೀಯ

ನಕಲಿ ಬಿಲ್ ನೀಡಿದ ಆರೋಪ: ರಾಜ್ಯದ 8 ವಿಧಾನ ಪರಿಷತ್ ಸದಸ್ಯರ ವಿರುದ್ಧ ದೂರು

ಎಂಟು ವಿಧಾನ ಪರಿಷತ್ ಸದಸ್ಯರು ನಕಲಿ ಪ್ರಯಾಣದ ಬಿಲ್ ಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ....

ಬೆಂಗಳೂರು: ಎಂಟು ವಿಧಾನ ಪರಿಷತ್ ಸದಸ್ಯರು ನಕಲಿ ಪ್ರಯಾಣದ ಬಿಲ್ ಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪ್ರತಿಪಕ್ಷದ ನಾಯಕ ಪದ್ಮನಾಭ್ ರೆಡ್ಡಿ ಅವರು ಬುಧವಾರ ಚುನಾವಣಾ ಆಯೋಗದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಬಿ.ಆರ್. ತಿಮ್ಮಾಪುರ, ಅಲ್ಲಮ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್.ಬೋಜರಾಜು, ಎಸ್ ರವಿ, ಎಂ.ಡಿ.ಲಕ್ಷ್ಮಿನಾರಾಯಣ್ ಹಾಗೂ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಸಿ.ಆರ್. ಮನೋಹರ್ ಮತ್ತು ಅಪ್ಪಾಜಿ ಗೌಡ ಅವರ ವಿರುದ್ಧ ಪದ್ಮನಾಭ್ ರೆಡ್ಡಿ ಅವರು ದೂರು ನೀಡಿದ್ದು, ನಕಲಿ ಬಿಲ್ ನೀಡಿದ ಈ 8 ಸದಸ್ಯರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಎಲ್ಲಾ ವಿಧಾನ ಪರಿಷತ್ ಸದಸ್ಯರು ರಾಜ್ಯದ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ 2016ರ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ತಾವು ಬೆಂಗಳೂರಿನ ಮತದಾರರು ಎಂದು ಮತ ಚಲಾಯಿಸಿದ್ದು, ಇದು ಚುನಾವಣಾ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಕಾರ್ಪೋರೇಟರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತಾವು ಬೆಂಗಳೂರು ನಿವಾಸಿಗಳು ಎಂದು ಘೋಷಿಸಿದ ಮೇಲೂ ಅವರು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ವಾಸಿಸುವುದಾಗಿ ಹೇಳಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಿಂದ ಪ್ರಯಾಣ ಭತ್ತೆ ಪಡೆಯುವ ಮೂಲಕ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪದ್ಮನಾಭ್ ರೆಡ್ಡಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT