ವಿಧಾನಸಭೆ 
ರಾಜಕೀಯ

ನಕಲಿ ಬಿಲ್ ನೀಡಿದ ಆರೋಪ: ರಾಜ್ಯದ 8 ವಿಧಾನ ಪರಿಷತ್ ಸದಸ್ಯರ ವಿರುದ್ಧ ದೂರು

ಎಂಟು ವಿಧಾನ ಪರಿಷತ್ ಸದಸ್ಯರು ನಕಲಿ ಪ್ರಯಾಣದ ಬಿಲ್ ಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ....

ಬೆಂಗಳೂರು: ಎಂಟು ವಿಧಾನ ಪರಿಷತ್ ಸದಸ್ಯರು ನಕಲಿ ಪ್ರಯಾಣದ ಬಿಲ್ ಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪ್ರತಿಪಕ್ಷದ ನಾಯಕ ಪದ್ಮನಾಭ್ ರೆಡ್ಡಿ ಅವರು ಬುಧವಾರ ಚುನಾವಣಾ ಆಯೋಗದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಬಿ.ಆರ್. ತಿಮ್ಮಾಪುರ, ಅಲ್ಲಮ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್.ಬೋಜರಾಜು, ಎಸ್ ರವಿ, ಎಂ.ಡಿ.ಲಕ್ಷ್ಮಿನಾರಾಯಣ್ ಹಾಗೂ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಸಿ.ಆರ್. ಮನೋಹರ್ ಮತ್ತು ಅಪ್ಪಾಜಿ ಗೌಡ ಅವರ ವಿರುದ್ಧ ಪದ್ಮನಾಭ್ ರೆಡ್ಡಿ ಅವರು ದೂರು ನೀಡಿದ್ದು, ನಕಲಿ ಬಿಲ್ ನೀಡಿದ ಈ 8 ಸದಸ್ಯರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಎಲ್ಲಾ ವಿಧಾನ ಪರಿಷತ್ ಸದಸ್ಯರು ರಾಜ್ಯದ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ 2016ರ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ತಾವು ಬೆಂಗಳೂರಿನ ಮತದಾರರು ಎಂದು ಮತ ಚಲಾಯಿಸಿದ್ದು, ಇದು ಚುನಾವಣಾ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಕಾರ್ಪೋರೇಟರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತಾವು ಬೆಂಗಳೂರು ನಿವಾಸಿಗಳು ಎಂದು ಘೋಷಿಸಿದ ಮೇಲೂ ಅವರು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ವಾಸಿಸುವುದಾಗಿ ಹೇಳಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಿಂದ ಪ್ರಯಾಣ ಭತ್ತೆ ಪಡೆಯುವ ಮೂಲಕ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪದ್ಮನಾಭ್ ರೆಡ್ಡಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT