ವಿಧಾನಸಭೆ 
ರಾಜಕೀಯ

ನಕಲಿ ಬಿಲ್ ನೀಡಿದ ಆರೋಪ: ರಾಜ್ಯದ 8 ವಿಧಾನ ಪರಿಷತ್ ಸದಸ್ಯರ ವಿರುದ್ಧ ದೂರು

ಎಂಟು ವಿಧಾನ ಪರಿಷತ್ ಸದಸ್ಯರು ನಕಲಿ ಪ್ರಯಾಣದ ಬಿಲ್ ಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ....

ಬೆಂಗಳೂರು: ಎಂಟು ವಿಧಾನ ಪರಿಷತ್ ಸದಸ್ಯರು ನಕಲಿ ಪ್ರಯಾಣದ ಬಿಲ್ ಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪ್ರತಿಪಕ್ಷದ ನಾಯಕ ಪದ್ಮನಾಭ್ ರೆಡ್ಡಿ ಅವರು ಬುಧವಾರ ಚುನಾವಣಾ ಆಯೋಗದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಬಿ.ಆರ್. ತಿಮ್ಮಾಪುರ, ಅಲ್ಲಮ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್.ಬೋಜರಾಜು, ಎಸ್ ರವಿ, ಎಂ.ಡಿ.ಲಕ್ಷ್ಮಿನಾರಾಯಣ್ ಹಾಗೂ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಸಿ.ಆರ್. ಮನೋಹರ್ ಮತ್ತು ಅಪ್ಪಾಜಿ ಗೌಡ ಅವರ ವಿರುದ್ಧ ಪದ್ಮನಾಭ್ ರೆಡ್ಡಿ ಅವರು ದೂರು ನೀಡಿದ್ದು, ನಕಲಿ ಬಿಲ್ ನೀಡಿದ ಈ 8 ಸದಸ್ಯರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಎಲ್ಲಾ ವಿಧಾನ ಪರಿಷತ್ ಸದಸ್ಯರು ರಾಜ್ಯದ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ 2016ರ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ತಾವು ಬೆಂಗಳೂರಿನ ಮತದಾರರು ಎಂದು ಮತ ಚಲಾಯಿಸಿದ್ದು, ಇದು ಚುನಾವಣಾ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಕಾರ್ಪೋರೇಟರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತಾವು ಬೆಂಗಳೂರು ನಿವಾಸಿಗಳು ಎಂದು ಘೋಷಿಸಿದ ಮೇಲೂ ಅವರು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ವಾಸಿಸುವುದಾಗಿ ಹೇಳಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಿಂದ ಪ್ರಯಾಣ ಭತ್ತೆ ಪಡೆಯುವ ಮೂಲಕ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪದ್ಮನಾಭ್ ರೆಡ್ಡಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್