ಡಿ.ಕೆ ಶಿವಕುಮಾರ್ 
ರಾಜಕೀಯ

ರೈತರ ಅನಧಿಕೃತ ಪಂಪ್ ಸೆಟ್ ತೆಗೆಸಲು ಹೋದರೆ ನಮ್ಮ ಕುರ್ಚಿ ಅಲುಗಾಡುತ್ತದೆ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿರುವ ನದಿ, ಕೆರೆ, ಕಾಲುವೆಗಳಿಗೆ ಲಕ್ಷಾಂತರ ರೈತರು ಅನಧಿಕೃತವಾಗಿ ಪಂಪ್ ಸೆಟ್ ಗಳನ್ನು ಅಳವಡಿಸಿದ್ದು, ಈ ರೈತರುಗಳ ವಿರುದ್ಧ ಕ್ರಮ ...

ಬೆಂಗಳೂರು: ರಾಜ್ಯದಲ್ಲಿರುವ ನದಿ, ಕೆರೆ, ಕಾಲುವೆಗಳಿಗೆ ಲಕ್ಷಾಂತರ ರೈತರು ಅನಧಿಕೃತವಾಗಿ ಪಂಪ್ ಸೆಟ್ ಗಳನ್ನು ಅಳವಡಿಸಿದ್ದು, ಈ ರೈತರುಗಳ  ವಿರುದ್ಧ ಕ್ರಮ ಕೈಗೊಳ್ಳುವುದು ಅಸಾಧ್ಯ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಡಿ.ಕೆ ಶಿವಕುಮಾರ್,  ಬೋರ್ ವೆಲ್ ಗಳನ್ನು ತೆಗೆಸಿದ ಬಳಿಕ ಅದರಲ್ಲಿ ಕಡಿಮೆ ನೀರು ಬರುತ್ತಿದ್ದರೇ,  ಬೋರ್ ವೆಲ್  ನೀರು ನಿಂತು ಹೋದರೇ ಹಾಗೂ ಬೋರ್ ವೆಲ್ ನ ನೀರು ಜಮೀನಿಗೆ ಸಾಕಾಗದಿದ್ದಾಗ ರೈತರುಗಳು 15 ರಿಂದ 20 ಕಿ.ಮೀ ವರೆಗೆ ಅನಧಿಕೃತ ಪಂಪ್ ಸೆಟ್ ಗಳನ್ನು ಹಾಕಿ ನದಿ, ಕೆರೆ, ಕಾಲುವೆಗಳಿಂದ ನೀರನ್ನು ಪಡೆಯುತ್ತಾರೆ.
ಈ ರೈತರ  ವಿರುದ್ಧ ಕ್ರಮ ಕೈಗೊಳ್ಳಲು ಹೋದರೇ ರೈತರು ಪ್ರತಿಭಟನೆಗೆ ಇಳಿಯುತ್ತಾರೆ, ಆಗ ನಮ್ಮ ಹಾಗೂ ನಿಮ್ಮ ಕುರ್ಚಿ ಅಲುಗಾಡುತ್ತದೆ ಎಂದು ತಮಾಷೆಯಾಗಿ ಉತ್ತರಿಸಿದರು. 
ನೀರಾವರಿ ಅಳವಡಿಸಿಕೊಂಡಿರುವ ಪ್ರತಿ ರೈತನಿಗೂ  ಸರ್ಕಾರ 60 ಸಾವಿರ ರು. ವಿದ್ಯುತ್ ಸಬ್ಸಿಡಿ ನೀಡುತ್ತಿದೆ. ಇಡೀ ದೇಶದಲ್ಲಿಯೇ ಕರ್ನಾಟಕ ಹೆಚ್ಚು ವಿದ್ಯುತ್ ಸಬ್ಸಿಡಿಯನ್ನು ರೈತರು ಸಬ್ಸಿಡಿ ಮೂಲಕ ನೀಡುತ್ತಿದೆ ಎಂದು ಹೇಳಿದರು.
ಸದ್ಯ 4,84,690 ಅನದಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, 3,63,065 ಪಂಪ್ ಸೆಟ್ ಗಳಿಗೆ 10 ಸಾವಿರ ರು ನ ನಂತೆ ಪಾವತಿಸಬೇಕಾಗಿದೆ. 2,48,574 ಪಂಪ್ ಸೆಟ್ ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT