ಡಿ.ಕೆ ಶಿವಕುಮಾರ್ 
ರಾಜಕೀಯ

ರೈತರ ಅನಧಿಕೃತ ಪಂಪ್ ಸೆಟ್ ತೆಗೆಸಲು ಹೋದರೆ ನಮ್ಮ ಕುರ್ಚಿ ಅಲುಗಾಡುತ್ತದೆ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿರುವ ನದಿ, ಕೆರೆ, ಕಾಲುವೆಗಳಿಗೆ ಲಕ್ಷಾಂತರ ರೈತರು ಅನಧಿಕೃತವಾಗಿ ಪಂಪ್ ಸೆಟ್ ಗಳನ್ನು ಅಳವಡಿಸಿದ್ದು, ಈ ರೈತರುಗಳ ವಿರುದ್ಧ ಕ್ರಮ ...

ಬೆಂಗಳೂರು: ರಾಜ್ಯದಲ್ಲಿರುವ ನದಿ, ಕೆರೆ, ಕಾಲುವೆಗಳಿಗೆ ಲಕ್ಷಾಂತರ ರೈತರು ಅನಧಿಕೃತವಾಗಿ ಪಂಪ್ ಸೆಟ್ ಗಳನ್ನು ಅಳವಡಿಸಿದ್ದು, ಈ ರೈತರುಗಳ  ವಿರುದ್ಧ ಕ್ರಮ ಕೈಗೊಳ್ಳುವುದು ಅಸಾಧ್ಯ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಡಿ.ಕೆ ಶಿವಕುಮಾರ್,  ಬೋರ್ ವೆಲ್ ಗಳನ್ನು ತೆಗೆಸಿದ ಬಳಿಕ ಅದರಲ್ಲಿ ಕಡಿಮೆ ನೀರು ಬರುತ್ತಿದ್ದರೇ,  ಬೋರ್ ವೆಲ್  ನೀರು ನಿಂತು ಹೋದರೇ ಹಾಗೂ ಬೋರ್ ವೆಲ್ ನ ನೀರು ಜಮೀನಿಗೆ ಸಾಕಾಗದಿದ್ದಾಗ ರೈತರುಗಳು 15 ರಿಂದ 20 ಕಿ.ಮೀ ವರೆಗೆ ಅನಧಿಕೃತ ಪಂಪ್ ಸೆಟ್ ಗಳನ್ನು ಹಾಕಿ ನದಿ, ಕೆರೆ, ಕಾಲುವೆಗಳಿಂದ ನೀರನ್ನು ಪಡೆಯುತ್ತಾರೆ.
ಈ ರೈತರ  ವಿರುದ್ಧ ಕ್ರಮ ಕೈಗೊಳ್ಳಲು ಹೋದರೇ ರೈತರು ಪ್ರತಿಭಟನೆಗೆ ಇಳಿಯುತ್ತಾರೆ, ಆಗ ನಮ್ಮ ಹಾಗೂ ನಿಮ್ಮ ಕುರ್ಚಿ ಅಲುಗಾಡುತ್ತದೆ ಎಂದು ತಮಾಷೆಯಾಗಿ ಉತ್ತರಿಸಿದರು. 
ನೀರಾವರಿ ಅಳವಡಿಸಿಕೊಂಡಿರುವ ಪ್ರತಿ ರೈತನಿಗೂ  ಸರ್ಕಾರ 60 ಸಾವಿರ ರು. ವಿದ್ಯುತ್ ಸಬ್ಸಿಡಿ ನೀಡುತ್ತಿದೆ. ಇಡೀ ದೇಶದಲ್ಲಿಯೇ ಕರ್ನಾಟಕ ಹೆಚ್ಚು ವಿದ್ಯುತ್ ಸಬ್ಸಿಡಿಯನ್ನು ರೈತರು ಸಬ್ಸಿಡಿ ಮೂಲಕ ನೀಡುತ್ತಿದೆ ಎಂದು ಹೇಳಿದರು.
ಸದ್ಯ 4,84,690 ಅನದಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, 3,63,065 ಪಂಪ್ ಸೆಟ್ ಗಳಿಗೆ 10 ಸಾವಿರ ರು ನ ನಂತೆ ಪಾವತಿಸಬೇಕಾಗಿದೆ. 2,48,574 ಪಂಪ್ ಸೆಟ್ ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT