ಡಿ.ಎಚ್ ಶಂಕರಮೂರ್ತಿ 
ರಾಜಕೀಯ

ಕಾಂಗ್ರೆಸ್ ಗೆ ತೀವ್ರ ಮುಖಭಂಗ: ಸಭಾಪತಿಯಾಗಿ ಡಿ.ಎಚ್. ಶಂಕರಮೂರ್ತಿ ಮುಂದುವರಿಕೆ

ವಿಧಾನ ಪರಿಷತ್ ಸಭಾಪತಿ ವಿರುದ್ಧ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ...

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಸದನದಲ್ಲಿ ಅವಿಶ್ವಾಸ ನಿರ್ಣಯದ ಮಂಡಿಸಿದ್ದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ಅವಿಶ್ವಾಸ ನಿರ್ಣಯದ ವಿರುದ್ಧ ಕೇವಲ 36 ಮತಗಳು ಚಲಾವಣೆಯಾಗಿದ್ದು, ಡಿ.ಎಚ್ ಶಂಕರಮೂರ್ತಿ ಅವರೇ ಸಭಾಪತಿಯಾಗಿ ಮುಂದುವರಿಯಲಿದ್ದಾರೆ.
ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ವಿರುದ್ದ ಹಾಗೂ ಶಂಕರಮೂರ್ತಿ ಪರವಾಗಿ ಜೆಡಿಎಸ್ ಎಂಎಲ್ ಸಿಗಳು ಮತ ಚಲಾಯಿಸಿದ್ದಾರೆ. 
ಅಂತಿಮ ಕ್ಷಣದಲ್ಲಿ ಬದಲಾದ ರಾಜಕೀಯ ಚದುರಂಗದಾಟದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ  ಬಿಜೆಪಿಬೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಹೀಗಾಗಿ ಮೇಲ್ಮನೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿದಿದೆ. 
ಅವಿಶ್ವಾಸ ನಿರ್ಣಯದ ವಿರುದ್ಧ 37 ಮತಗಳು ಚಲಾವಣೆಯಾದರೇ ನಿರ್ಣಯದ ಪರ 36 ಮತಗಳು ಚಲಾವಣೆಯಾಗಿ ಕೇವಲ ಒಂದು ಮತದ ಅಂತರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ.
ವಿಧಾನಪರಿಷತ್ ಉಪ ಸಭಾಪತಿ ಮರಿ ತಿಬ್ಬೇಗೌಡ ಎದ್ದು ನಿಂತು ಮತದಾನ ಮಾಡಲು ಅವಕಾಶ ನೀಡಿದರು. ಇನ್ನೂ ತಮಗೆ ಬೆಂಬಲ ಸೂಚಿಸಿದ್ದಕ್ಕೆ  ಶಂಕರಮೂರ್ತಿ ಜೆಡಿಎಸ್ ಸದಸ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪರಿಷತ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!