ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಗೋಮಾಂಸ ತಿನ್ನುವವರು ಮನೆಯಲ್ಲಿ ತಿಂದು ಸಾಯಲಿ: ಬಿಎಸ್ ವೈ ಆಕ್ರೋಶ

ಮೈಸೂರಿನ ಕಲಾಮಂದಿರದಲ್ಲಿ ಬಹಿರಂಗವಾಗಿ ಗೋ ಮಾಂಸ ಸೇವಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ....

ಬಳ್ಳಾರಿ: ಮೈಸೂರಿನ ಕಲಾಮಂದಿರದಲ್ಲಿ ಬಹಿರಂಗವಾಗಿ ಗೋ ಮಾಂಸ ಸೇವಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗೋಮಾಂಸ ತಿನ್ನುವವರು ಮನೆಯಲ್ಲಿ ತಿಂದು ಸಾಯಲಿ ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಗೋ ಮಾಂಸ ಸೇವನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಗೋ ಮಾಂಸವನ್ನು ಮನೆಯಲ್ಲಿ ಬೇಕಾದರೆ ತಿಂದು ಸಾಯಲಿ. ಆದರೆ ಸಾರ್ವಜನಿಕವಾಗಿ ಗೋ ಮಾಂಸ ತಿಂದಿರುವುದು ಅಕ್ಷಮ್ಯ ಅಪರಾಧ, ಇದನ್ನು ಯಾರೊಬ್ಬರು ಕ್ಷಮಿಸಲ್ಲ ಎಂದರು.
ಕಲಾ ಮಂದಿರದಲ್ಲಿ ಗೋ ಮಾಂಸ ತಿಂದವರನ್ನು ಬಹಿಷ್ಕರಿಸಬೇಕು. ಇದು ಸಾರ್ವಜನಿಕರಿಗೆ ಮಾಡಿದ ಅಪಮಾನ. ಗೋ ಮಾಂಸ ಸೇವಿಸಿದವರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಿನ್ನೆ ಮೈಸೂರಿನ ಕಲಾಮಂದಿರದಲ್ಲಿ ಚಾರ್ವಾಕ ಸೋಶಿಯಲ್ ಅಂಡ್ ಕಲ್ಚರಲ್ ಟ್ರಸ್ಟ್ ಎವಿಎಸ್ ಎಸ್ ಸಂಸ್ಥೆ ಆಯೋಜಿಸಿದ್ದ ಆಹಾರದ ಹಕ್ಕು ವ್ಯಕ್ತಿ ಸ್ವಾತಂತ್ರ್ಯ ವಿಷಯದ ಸಂವಾದದ ಕಾರ್ಯಕ್ರಮದಲ್ಲಿ ಪ್ರೊ.ಮಹೇಶ್ ಚಂದ್ರ ಗುರು ಸೇರಿದಂತೆ ಹಲವರು ಗೋಮಾಂಸ ಸೇವಿಸಿದ್ದರು. ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದ್ದು, ಬಹಿರಂಗವಾಗಿ ಗೋ ಮಾಂಸ ಸೇವಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಇಂದು ಬಿಜೆಪಿ ಕಾರ್ಯಕರ್ತರು ಮೈಸೂರಿನ ಎಸ್ ಟಿಎಫ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT