ಎಚ್ ವಿಶ್ವನಾಥ್ ಹಾಗೂ ಅವರ ಪುತ್ರ ಪೂರ್ವಜ್ 
ರಾಜಕೀಯ

ಜುಲೈ 4ರಂದು ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಖಚಿತಪಡಿಸಿದ ಪುತ್ರ ಪೂರ್ವಜ್

ಅತ್ಯಂತ ನೋವಿನಿಂದಲೇ ಕಾಂಗ್ರೆಸ್ ತೊರೆದಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಜುಲೈ 4ರಂದು ಜೆಡಿಎಸ್...

ಬೆಂಗಳೂರು: ಅತ್ಯಂತ ನೋವಿನಿಂದಲೇ ಕಾಂಗ್ರೆಸ್ ತೊರೆದಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಜುಲೈ 4ರಂದು ಜೆಡಿಎಸ್ ಸೇರ್ಪಡೆಯಾಗುತ್ತಿರುವುದಾಗಿ ಅವರ ಪುತ್ರ ಪೂರ್ವಜ್ ಅವರು ಬುಧವಾರ ಫೇಸ್ ಬುಕ್ ನಲ್ಲಿ ಖಚಿತಪಡಿಸಿದ್ದಾರೆ.
ಜುಲೈ 4ರಂದು ಕರ್ನಾಟಕದ ರಾಜಕೀಯ ಕರ್ಣ ವಿಶ್ವನಾಥ್ ಅವರು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷ ಸೇರಲಿದ್ದಾರೆ ಎಂದು ಪೂರ್ವಜ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಆತ್ಮೀಯ ಗೆಳೆಯರೆ, ಕರ್ನಾಟಕದ ರಾಜಕೀಯ ಕರ್ಣನ ನಡೆ ಬಗ್ಗೆ ಒಂದು ಮಾಹಿತಿ... ಜೂನ್ 23ರಂದು 40 ವರ್ಷಗಳ ಕಾಂಗ್ರೆಸ್ ಪಕ್ಷದ ಸಂಬಂಧವನ್ನು ಒಲ್ಲದ ಮನಸಿನಿಂದ ಕಡಿದುಕೊಂಡ ಬಳಿಕ ಸುಮಾರು ಒಂದು ವಾರಗಳ ಕಾಲ ಅಭಿಮಾನಿಗಳು ಹಾಗೂ ಸ್ನೇಹಿತರೊಂದಿಗೆ ಚರ್ಚಿಸಿ ಅಂತಿಮವಾಗಿ ಕರ್ನಾಟಕದ ನೆಲ ಜಲ ಹಾಗೂ ರೈತರ ಕಷ್ಟಕ್ಕೆ ಸ್ಪಂದಿಸುವ ಹಾಗೂ ತಮ್ಮನ್ನು ನಂಬಿರುವ ಮುಸ್ಲಿಂ ಗೆಳೆಯರಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ನಮ್ಮ ತಂದೆಯವರು ಜುಲೈ 4ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯುತ್ತಿದ್ದಾರೆ. ಅಂದು ಸಾಹೇಬರ ಅಭಿಮಾನಿಗಳು, ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅವರ ಕೈ ಬಲಪಡಿಸುವಂತೆ ಪೂರ್ವಜ್ ಫೇಸ್ ಬುಕ್ ನಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT