ಸಿದ್ದರಾಮಯ್ಯ ಮತ್ತು ಎಸ್ ಎಂ ಕೃಷ್ಣ 
ರಾಜಕೀಯ

ಎಸ್ ಎಂಕೆ ಆಪ್ತ ಶಿವಲಿಂಗಯ್ಯರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ ಸಿಎಂ

ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಪ್ತ ಶಿವಲಿಂಗಯ್ಯ ಅವರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ...

ಮೈಸೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಪ್ತ ಶಿವಲಿಂಗಯ್ಯ ಅವರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ವಜಾಗೊಳಿಸಿದ್ದಾರೆ.

CADA ದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ರಾಜ್ಯ ಸರ್ಕಾರ ಕಾಂಗ್ರೆಸ್ ಮುಖಂಡ ನಂಜಪ್ಪ ಅವರನ್ನು ನೇಮಕ ಮಾಡಿದೆ. 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೂ ಮುನ್ನ ನಂಜಪ್ಪ ಎರಡು ವಿಧಾನ ಸಭೆ ಚುನಾವಣೆಯಲ್ಲಿ ಎಚ್ ಎಸ್ ಮಹಾದೇವ ಪ್ರಸಾದ್ ವಿರುದ್ಧ ಸ್ಪರ್ದಿಸಿದ್ದರು.

ಪ್ರಮುಖ ವೀರಶೈವ ಮುಖಂಡರಾಗಿರುವ ನಂಜಪ್ಪ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ತಮ್ಮೆಡೆದೆ ಸೆಳೆಯಬಹುದೆಂಬ ಭಯದಿಂದಾಗಿ ಕಾಂಗ್ರೆಸ್ ನಂಜಪ್ಪ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿದೆ, ಇದು  ಉಪ ಚುನಾವಣೆಯಲ್ಲಿ ಗೀತಾ ಮಹದೇವ್ ಪ್ರಸಾದ್ ಅವರ ಗೆಲುವಿಗೆ ಕಾರಣವಾಗಲಿದೆ ಎಂಬ ಲೆಕ್ಕಾಚಾರದೊಂದಿಗೆ ಅವರನ್ನು ' ಕಾಡಾ' ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಗುಂಡ್ಲುಪೇಟೆ ವಿಧಾನ ಸಭೆ ಉಪ ಚುನಾವಣೆಯ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಗೀತಾ ಮಹಾದೇವ ಪ್ರಸಾದ್  ಈಗಾಗಲೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಜನರನ್ನು ಭೇಟಿ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!

ಮಂಡ್ಯ: ಅರ್ಚಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಪತ್ನಿಯ ಕಿರಾತಕ ಸಂಚು ಬಯಲು!

SCROLL FOR NEXT