ಕುಮಾರ್ ಬಂಗಾರಪ್ಪ 
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಕುಮಾರ್ ಬಂಗಾರಪ್ಪ ರಾಜಿನಾಮೆ

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದು, ತಮ್ಮ ರಾಜಿನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ...

ಬೆಂಗಳೂರು: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದು, ತಮ್ಮ ರಾಜಿನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ. 
ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕುಮಾರ್ ಬಂಗಾರಪ್ಪ ಅವರು, ಇಂದು ನಾನು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡುತ್ತಿರುವುದಾಗಿ ಹೇಳಿದ್ದು ತಮ್ಮ ರಾಜಿನಾಮೆ ಪತ್ರವನ್ನು ಅಧ್ಯಕ್ಷರಿಗೆ ರವಾನಿಸುತ್ತಿದ್ದೇನೆ. ರಾಜ್ಯದಲ್ಲಿ ಸುಭದ್ರ ಸರ್ಕಾರ ತರುವ ನಿಟ್ಟಿನಲ್ಲಿ ತಾವು ರಾಜಿನಾಮೆ ನೀಡುತ್ತಿದ್ದೇನೆ. ಪಕ್ಷ ಬದಲಾವಣೆಯಾದರೆ ವ್ಯಕ್ತಿತ್ವ ಬದಲಾವಣೆಯಾಗಲ್ಲ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಯನ್ನು ಸೇರುತ್ತಿರುವುದಾಗಿ ಘೋಷಿಸಿರುವ ಕುಮಾರ್ ಬಂಗಾರಪ್ಪ, ನನ್ನ ಬೆಂಬಲಿಗರು, ಅಭಿಮಾನಿಗಳ ಅಭಿಪ್ರಾಯದಂತೆ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದು ಬಿಜೆಪಿ ಪಕ್ಷ ಸೇರುತ್ತಿದ್ದೇನೆ ಎಂದರು.
ಇದೇ ವೇಳೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರ್ ಬಂಗಾರಪ್ಪ, ಕಾಗೋಡು ತಿಪ್ಪಮ್ಮ ಅವರು ನನ್ನ ವಿರುದ್ಧ ರಾಜಕೀಯ ದ್ವೇಷ ಮುಂದುವರೆಸಿದ್ದಾರೆ. ಹಲವು ವರ್ಷಗಳು ಕಳೆದರೂ ನಾಯಕತ್ವ ವಿಚಾರದಲ್ಲಿ ಅವರು ವೈರತ್ವವನ್ನು ಮುಂದುವರೆಸಿದ್ದಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT