ಸೋನಿಯಾ ಗಾಂಧಿ ಮತ್ತು ಸಿಟಿ ರವಿ 
ರಾಜಕೀಯ

ಸೋನಿಯಾ ಗಾಂಧಿ ವಿರುದ್ಧ ಸಿ,ಟಿ ರವಿ ವ್ಯಂಗ್ಯ ಟ್ವೀಟ್: ಕಾಂಗ್ರೆಸ್ ನಿಂದ ವ್ಯಾಪಕ ಖಂಡನೆ

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ವಿದೇಶ ಪ್ರವಾಸ ಸಂಬಂಧ ಬಿಜೆಪಿ ವಕ್ತಾರ ಸಿ.ಟಿ.ರವಿ ಟ್ವೀಟ್‌ ಕಾಂಗ್ರೆಸ್‌ ವಲಯದಲ್ಲಿ ಆಕ್ರೋಶಕ್ಕೆ....

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ವಿದೇಶ ಪ್ರವಾಸ ಸಂಬಂಧ ಬಿಜೆಪಿ ವಕ್ತಾರ ಸಿ.ಟಿ.ರವಿ  ಟ್ವೀಟ್‌ ಕಾಂಗ್ರೆಸ್‌ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ.

ಸಿ. ಟಿ.ರವಿ ಮಾತು ಬೇಜವಾಬ್ದಾರಿತನದಿಂದ ಕೂಡಿದೆ. ಸೋನಿಯಾ ಗಾಂಧಿ ಬಗ್ಗೆ ಹೇಳಿಕೆ ನೀಡುವಾಗ ಜವಾಬ್ದಾರಿಯುತ ರಾಜಕಾರಣಿಯಾಗಿ ಮಾತನಾಡಬೇಕು ಅವರ ಮಾತುಗಳಲ್ಲಿ ಒಳ್ಳೆಯ ಅಭಿರುಚಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಟಿ.ರವಿ ಅವರನ್ನು ನಿಮಾನ್ಸ್‌ಗೆ ಶಿಫ್ಟ್ ಮಾಡಬೇಕು. 2 ಬಾರಿ ಪ್ರಧಾನಿ ಹುದ್ದೆ ತ್ಯಾಗ ಮಾಡಿದ ಮಹಿಳೆಯ ಬಗ್ಗೆ ಈ ರೀತಿಯ ಹೇಳಿಕೆ ನೀಡುವಾಗ ಆಲೋಚನೆ ಮಾಡಬೇಕೆಂದು ಸಚಿವ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರು ದಶಕಗಳ ಕಾಲ ದೇಶವನ್ನು ಆಳಿದ ಗಾಂಧಿ ಕುಟುಂಬಕ್ಕೆ ಭಾರತದಲ್ಲಿ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಲು ಸಾಧ್ಯವಾಗಿಲ್ಲ,  ಹೀಗಾಗಿ ಸೋನಿಯಾಗಾಂಧಿ ವಿದೇಶಕ್ಕೆ ಹೋಗುತ್ತಾರೆ. ಈ ಬಾರಿಯೂ ಹೋಗಿದ್ದಾರೆ, ಅವರು ಚಿಕಿತ್ಸೆಗೆ ಹೋಗಿದ್ದಾರೋ ಅಥವಾ ಬ್ಯಾಂಕ್‌ ಅಕೌಂಟ್‌ ನಿರ್ವಹಣೆ ಮಾಡಲು ಹೋಗಿದ್ದಾರೋ?  ಹೇಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದೆ, ಏಕೆ ಸೋನಿಯಾ ಗಾಂಧಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಬಾರದು, ಇಲ್ಲಿ ಅವರಿಗೆ ಉತ್ತಮ ಟ್ರೀಟ್ ಮೆಂಟ್ ಸಿಗುತ್ತದೆ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT