ಬೆಂಕಿ ಮಹದೇವ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ದಿನೇಶ್ ಗುಂಡೂರಾವ್ 
ರಾಜಕೀಯ

ನಂಜನಗೂಡು ಉಪಚುನಾವಣೆ: ಪ್ರಚಾರಕ್ಕೆ ಬೆಂಕಿ ಮಹದೇವು ಕುಟುಂಬಸ್ಥರ ಓಲೈಕೆಗೆ ಕಾಂಗ್ರೆಸ್ ಮುಂದು

ಶತೃಗಳ ಶತೃ ಮಿತ್ರ ಎಂಬ ಗಾದೆಯಂತೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ...

ಮೈಸೂರು: ಶತೃಗಳ ಶತೃ ಮಿತ್ರ ಎಂಬ ಗಾದೆಯಂತೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಈ ಮಾತನ್ನು ಸತ್ಯವಾಗಿಸಲು ಹೊರಟಿದ್ದಾರೆ.

ನಂಜನಗೂಡು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಬದ್ಧ ವೈರಿ ಬೆಂಕಿ ಮಹದೇವು ಅವರ ಕುಟುಂಬಸ್ಥರನ್ನು ಓಲೈಸಲು ಕಾಂಗ್ರೆಸ್ ಮುಂದಾಗಿದೆ. ಆ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಯತ್ನಿಸುತ್ತಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್,  ಶಿಕ್ಷಣ ಸಚಿವ ತನ್ವೀರ್ ಸೇಠ್, ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮಹದೇವು ಅವರ ಮನೆಗೆ ತೆರಳಿ ಅವರ ಕುಟುಂಬಸ್ಥರ ಸಹಕಾರ ಕೋರಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ನಂಜನಗೂಡಿನಲ್ಲಿ ಪ್ರಾಬಲ್ಯವಿರು ಬಿಜೆಪಿ ಸಮುದಾಯದ ಮತ ಸೆಳೆಯಲು ಯಡಿಯೂರಪ್ಪ ನಿರಂತರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಲಿಂಗಾಯತ ಮತದಾರರನ್ನು ಸೆಳೆಯುವುದು ಕಠಿಣ ಕೆಲಸ ಎಂದು ತಿಳಿದಿರುವ ಕಾಂಗ್ರೆಸ್ ಇಬ್ಬರು ನಾಯಕರುಗಳ ದ್ವೇಷವನ್ನು ಬಂಡವಾಳವನ್ನಾಗಿಸಿಕೊಳ್ಳಲು ಹೊರಟಿದೆ.

ಶ್ರೀನಿವಾಸ್ ಪ್ರಸಾದ್ ಅವರ ವೈರಿ ಬೆಂಕಿ ಮಹದೇವು ಕುಟುಂಬದ ಬೆಂಬಲ ಪಡೆದರೇ ಲಿಂಗಾಯತ ಮತಗಳನ್ನು ತನ್ನತ್ತ ಸೆಳೆಯಬಹುದು ಎಂಬುದು ಕಾಂಗ್ರೆಸ್  ಲೆಕ್ಕಾಚಾರ.

ಬೆಂಕಿ ಮಹಾದೇವು ಅವರ ಫೋಟೋಗಳನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಲಲು ಪತ್ನಿ ರಾಜಮ್ಮ ಅವರ ಅನುಮತಿ ಕೋರಿದ್ದೇವೆ, ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಆದರೆಈ ನಿರ್ಧಾರ ಮಹದೇವು ಅವರ ಬೆಂಬಲಿಗರಿಗೆ ತಪ್ಪು ಸಂದೇಷ ನೀಡಲಿದೆ, ಏಕೆಂದರೆ ಮಹದೇವು ಅವರ ಅಳಿಯ ಜಯದೇವ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಅವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಮತ್ತು ಬೆಂಕಿ ಮಹದೇವು ನಡುವಿನ ಕಡಿಮೆ ಮಾಡಲು ಯತ್ನಿಸುತ್ತಿರುವ ಬಿಜೆಪಿ ಮುಖಂಡರು, ಮಹದೇವು ಅವರ ಮನೆಗೆ ಒಮ್ಮೆ ಭೇಟಿ ನೀಡುವಂತೆ ಶ್ರೀನಿವಾಸ್ ಪ್ರಸಾದ್ ಅವರಿಗೆ ಒತ್ತಡ ಹಾಕಿದ್ದಾರೆ. ಆದರೆ ಇದಕ್ಕೆ ಶ್ರಿನಿವಾಸ್ ಪ್ರಸಾದ್ ಇದಕ್ಕೆ ಸುತರಾ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT