ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ 
ರಾಜಕೀಯ

ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ: ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದ ಜಗದೀಶ್ ಶೆಟ್ಟರ್

ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ಜನರಿಗೆ ವಿಶೇಷ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವನ್ನು ಇಬ್ಬಾಗ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ...

ಹುಬ್ಬಳ್ಳಿ: ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ಜನರಿಗೆ ವಿಶೇಷ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವನ್ನು ಇಬ್ಬಾಗ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ. 
ರಾಜ್ಯ ಬಜೆಟ್ ನಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಜನರಿಗೆ ವಿಶೇಷ ಯೋಜನೆ ಹಾಗೂ ಅನುದಾನಗಳನ್ನು ಘೋಷಣೆ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ಮಾತನಾಡಿರುವ ಅವರು, ಸೌದಿ ಅರೇಬಿಯಾದಿಂದ ರಾಜ್ಯಕ್ಕೆ ಬರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಸ್ಥರಿಗೆ ಮಾಸಿಕ ಭತ್ಯೆ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮದ ಆಧಾರದ ಮೇಲೆ ಮತಗಳನ್ನು ಒಡೆಯಲು ಹಾಗೂ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. 
ಅಧಿವೇಶನ ಸಂದರ್ಭದಲ್ಲಿ ಈ ವಿಚಾರಗಳ ಬಗ್ಗೆ ಮಾತನಾಡಲು ರಾಜ್ಯ ಸರ್ಕಾರ ನಮಗೆ ಅವಕಾಶವನ್ನು ನೀಡುತ್ತಿಲ್ಲ. ಸ್ಪೀಕರ್ ಮೇಲೆಯೇ ಆಡಳಿತಾರೂಢ ಸರ್ಕಾರ ಒತ್ತಡ ಹೇರುತ್ತಿದ್ದು, ವಿಪಕ್ಷಗಳ ನಾಯಕರಿಗೆ ಮಾತನಾಡಲು ಬಿಡುತ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT