ಯು.ಟಿ ಖಾದರ್ ಅವರ ಕಾರು 
ರಾಜಕೀಯ

ನಿಷೇಧಿಸಿ 2 ದಿನ ಕಳೆದರೂ ಕೆಂಪು ದೀಪ ತೆಗೆಯಲಿಲ್ಲ ಸಚಿವ ಯು.ಟಿ ಖಾದರ್

ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲು ಮುಂದಾಗಿರುವ ಕೇಂದ್ರ ಮೇ 1 ರಿಂದ ಸರ್ಕಾರ ಗಣ್ಯರ ವಾಹನಗಳ ಮೇಲಿನ ಕೆಂಪು ದೀಪ ತೆಗೆಯುವಂತೆ ಆದೇಶ ಹೊರಡಿಸಿದೆ, ...

ಮಂಗಳೂರು: ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲು ಮುಂದಾಗಿರುವ ಕೇಂದ್ರ ಮೇ 1 ರಿಂದ ಸರ್ಕಾರ ಗಣ್ಯರ ವಾಹನಗಳ ಮೇಲಿನ ಕೆಂಪು ದೀಪ ತೆಗೆಯುವಂತೆ ಆದೇಶ ಹೊರಡಿಸಿದೆ, ಅದರಂತೆ ಅನೇಕರು ಕೆಂಪು ದೀಪ ತೆಗೆಸಿದ್ದಾರೆ. ಆದರೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ಮಾತ್ರ ತಮ್ಮ ಎರಡು ಎಸ್ ಯುವಿ ಕಾರುಗಳ ಮೇಲಿನ  ಕೆಂಪು ದೀಪ ತೆಗೆಸಿಲ್ಲ.  
ಮಂಗಳವಾರ ಕದ್ರಿಯ ಸರ್ಕ್ಯೂಟ್ ಹೌಸ್ ಬಳಿ  ಖಾದರ್ ಅವರ ಕಾರು ನಿಲ್ಲಿಸಲಾಗಿತ್ತು ಸೋಮವಾರ ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಖಾದರ್ ಸಿಎಂ ಸಿದ್ದರಾಮಯ್ಯ ಆದೇಶ ನೀಡುವ ವರೆಗೂ ತಾವು ಕೆಂಪು ದೀಪ ತೆಗೆಯುವುದಿಲ್ಲ ಎಂದು ಹೇಳಿದ್ದರು. 
ಈ ಸಂಬಂಧ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಿಗಲಿಲ್ಲ, ಖಾದರ್ ಬೆಂಗಳೂರಿಗೆ ತೆರಳಿದ್ದರು. ಮೂಲಗಳ ಪ್ರಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ನಿರ್ದೇಶನ ನೀಡಿದ ನಂತರ ಮಾತ್ರ ಖಾದರ್ ಕೆಂಪು ದೀಪ ತೆಗೆಸುತ್ತಾರಂತೆ. 
ನನಗೆ ಕಾರು ನೀಡಿರುವುದು ರಾಜ್ಯ ಸರ್ಕಾರ, ಕೆಂಪು ದೀಪ ಅಳವಡಿಸಿದ್ದು ರಾಜ್ಯ ಸರ್ಕಾರವೇ, ಹೀಗಾಗಿ ನಾನು ಬದಲಿಸಲು ಸಾಧ್ಯವಿಲ್ಲ, ಸಿದ್ದರಾಮಯ್ಯ ಆದೇಶಿಸಿದರೇ ಆಗ ನಾನು ಕೆಂಪು ದೀಪೆ ತೆಗೆಸುತ್ತೇನೆ ಎಂದು ಸೋಮವಾರ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT