ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ವಿಧಾನಸಭೆ ಚುನಾವಣೆ 2018: ಪಕ್ಷದ ಬಲವರ್ಧನೆಗೆ ಜೆಡಿಎಸ್ ಮುಂದು; ವೀಕ್ಷಕರ ನೇಮಕ

ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ ಕೆಳ ಹಂತದಲ್ಲಿ ಪಕ್ಷವನ್ನು ಬಲಪಡಿಸಲು ಜಾತ್ಯತೀತ ಜನತಾ ದಳ 60 ..

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ  ಕೆಳ ಹಂತದಲ್ಲಿ ಪಕ್ಷವನ್ನು ಬಲಪಡಿಸಲು ಜಾತ್ಯತೀತ ಜನತಾ ದಳ 60 ವೀಕ್ಷಕರನ್ನು  ಸೋಮವಾರ ನೇಮಿಸಿದೆ. ಜೆಡಿಎಸ್‌ ರಾಜ್ಯ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಾಧ್ಯಮ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. 
ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಯೊಂದು ಜಿಲ್ಲೆಗೆ ತಲಾ ಇಬ್ಬರು ವೀಕ್ಷಕರು ನೇಮಿಸಲಾಗಿದ್ದು, ಅವರು ಈ ತಿಂಗಳ 30 ರೊಳಗೆ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯ್ತಿ ಮಟ್ಟದ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ ಎಂದು ಅವರು ಹೇಳಿದರು. ಪಕ್ಷದ ಪ್ರಚಾರ ಸಮಿತಿ ರಚಿಸಲಾಗುತ್ತಿದೆ.  ಸಮಿತಿಯಲ್ಲಿ ಅಧ್ಯಕ್ಷ ಮತ್ತು 5 ಜನ  ಸದಸ್ಯರಿರುತ್ತಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯವನ್ನು  ಜನರಿಗೆ ಮುಟ್ಟಿಸುವ ಕೆಲಸ ಈ  ಸಮಿತಿ ಮಾಡಲಿದೆ ಎಂದರು.
ಜಿಲ್ಲೆ, ತಾಲೂಕು, ಗ್ರಾ.ಪಂ ವ್ಯಾಪ್ತಿಯಲ್ಲಿ ಪದಾಧಿಕಾರಿಗಳ ನೇಮಕಗೊಳಿಸಲು ವೀಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಬೂತ್ ಮಟ್ಟದಲ್ಲಿ ಪದಾಧಿಕಾರಿಗಳ ನೇಮಕದ ಜವಾಬ್ದಾರಿಯನ್ನು ಅವರು ನಿರ್ವಹಿಸಲಿದ್ದಾರೆ.
ಜೆಡಿಎಸ್‌ನಲ್ಲಿ ಅಪ್ಪ- ಮಕ್ಕಳ ಪಕ್ಷ ಎಂಬ ಅಪವಾದ ತೊಡೆದು ಹಾಕಲು ಈ ಹೊಸ ವ್ಯವಸ್ಥೆ ರೂಪಿಸಲಾಗಿದೆ. ಜತೆಗೆ ಪಕ್ಷದ ಕೆಲವರು ಬೇರೆ ಬೇರೆ ಪಕ್ಷಗಳಿಗೆ ವಲಸೆ ಹೋಗಿದ್ದಾರೆ. ಹೀಗಾಗಿ ಎರಡನೇ ಹಂತದ ನಾಯಕರನ್ನು ಬೆಳೆಸಬೇಕು ಎಂದು ಅಧಿಕಾರ ವಿಕೇಂದ್ರೀಕರಣ ಮಾಡಲಾಗಿದೆ ಎಂದರು.  150 ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರಿಗೆ ರವಾನಿಸಿದ್ದೇವೆ. ಹಲವಾರು‌ ಕ್ಷೇತ್ರಗಳಲ್ಲಿ ಪದಾಧಿಕಾರಿಗಳ ನೇಮಕ ಆಗಿಲ್ಲದ ಕಾರಣ ಅಭ್ಯರ್ಥಿಗಳ ಘೋಷಣೆ ವಿಳಂಬವಾಗಿದೆ  ಎಲ್ಲಾ ಪದಾಧಿಕಾರಿಗಳು ಒಪ್ಪಿದ ಮೇಲೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT