ಜೆಡಿಎಸ್ - ಬಿಜೆಪಿ ಲೋಗೋ 
ರಾಜಕೀಯ

ಮತದಾರರ ಓಲೈಕೆಗೆ ಕಸರತ್ತು: ಜೆಡಿಎಸ್-'ಮುದ್ದೆ, ರೋಟಿ ಪೇ ಚರ್ಚಾ', ಬಿಜೆಪಿ- ಕಬಡ್ಡಿ' ಟೂರ್ನಮೆಂಟ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ 150 ಸೀಟುಗಳನ್ನು ಗೆಲ್ಲಲೇ ಬೇಕೆಂಬ ಹಂಬಲದಲ್ಲಿರುವ ಬಿಜೆಪಿ ಗ್ರಾಮೀಣ ಮತ್ತು ಅರೆ ಗ್ರಾಮೀಣ ..

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ಶತಾಯ ಗತಾಯ 150 ಸೀಟುಗಳನ್ನು ಗೆಲ್ಲಲೇ ಬೇಕೆಂಬ ಹಂಬಲದಲ್ಲಿರುವ ಬಿಜೆಪಿ ಗ್ರಾಮೀಣ ಮತ್ತು ಅರೆ ಗ್ರಾಮೀಣ ಭಾಗದ ಯುವಕರನ್ನು ಸೆಳೆಯಲು ಮುಂದಾಗಿದೆ.
ಬಿಜೆಪಿ ಯುವ ಮೋರ್ಚಾ ವಿಧಾನಸಭೆ ಕ್ಷೇತ್ರಗಳಲ್ಲಿ  ತಾಲೂಕು ಮತ್ತು ಜಿಲ್ಲಾಮಟ್ಟದ ಕಬಡ್ಡಿ ಟೂರ್ನಮೆಂಟ್ ಗಳನ್ನು ಆಯೋಜಿಸುತ್ತಿದೆ. 
ಪಕ್ಷದ ಹಿರಿಯ ಮುಖಂಡ ದೀನದಯಾಳ್ ಉಪಾಧ್ಯಾಯ ಅವರ ಶತಮಾನೋತ್ಸವದ ಅಂಗವಾಗಿ ಮೇ 14ರಿಂದ ಕಬಡ್ಡಿ ಟೂರ್ನಮೆಂಟ್ ಆಯೋಜಿಸಿದೆ. ಪ್ರತಿ ವಿಧಾನಸಭೆ ಕ್ಷೇತ್ರದಿಂದ 20 ತಂಡಗಳಿಂದ ಸುಮಾರು 50 ಸಾವಿರ ಯುವಕರು ಭಾಗವಹಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಈ ಕಾರ್ಯಕ್ರಮದಿಂದಾಗಿ ಪ್ರತಿ ವಿಧಾನಸಭೆ ಕ್ಷೇತ್ರದಿಂದ ಸುಮಾರು 300 ಮಂದಿ  ಸದಸ್ಯರು ಬಿಜೆಪಿ ಯುವ ಮೋರ್ಚಾಗೆ ಸೇರ್ಪಡೆಗೊಳ್ಳಲು ಸಹಾಯವಾಗಲಿದೆ. ಪ್ರೇಕ್ಷಕರನ್ನು ಸೆಳೆಯಲು ಪ್ರೋ ಕಬಡ್ಡಿ ಲೀಗ್ ಸ್ಟಾರ್ ಗಳನ್ನು ಕರೆಸುತ್ತೇವೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್ ಗೌಡ ಹೇಳಿದ್ದಾರೆ.
ಜೆಡಿಎಸ್ ಪಕ್ಷ ಕೂಡ ಸುಮ್ಮನೇ ಕೂತಿಲ್ಲ, ಗ್ರಾಮೀಣ ಭಾಗದ ಮತದಾರರನ್ನು ಸೆಳೆಯಲು ಹೊಸ ತಂತ್ರವೊಂದನ್ನು ರೂಪಿಸಿದೆ, ಪಕ್ಷದ ವರಿಷ್ಠ ಎಚ್ .ಡಿ ದೇವೇಗೌಡರ 85ನೇ  ಹುಟ್ಟುಹಬ್ಬದ ಅಂಗವಾಗಿ,ಮೇ 18 ರಿಂದ  ಮುದ್ದೆ ಮತ್ತು ರೋಟಿ ಪೇ ಚರ್ಚಾ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.ದಕ್ಷಿಣ ಕರ್ನಾಟಕದವರಿಗಾಗಿ ಮುದ್ದೆ ಪೇ ಚರ್ಚಾ, ಉತ್ತರ ಕರ್ನಾಟಕದವರಿಗಾಗಿ ರೋಟಿ ಪೇ ಚರ್ಚಾ ನಡೆಸಲಿದೆ. ಈ ಚರ್ಚೆ ವೇಳೆ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಅನ್ಯಾಯ ಮತ್ತು ಕಳಸಾ ಬಂಡೂರಿ ವಿವಾದಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವೈಫಲ್ಯಗಳ ಕುರಿತು ಚರ್ಚಿಸಲಾಗುವುದು ಎಂದು ಶಾಸಕ ವೈಎಸ್ ವಿ ದತ್ತಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT