ಸಂಗ್ರಹ ಚಿತ್ರ 
ರಾಜಕೀಯ

ಕಾಂಗ್ರೆಸ್ ಮಾಜಿ ಸಂಸದ ಎಚ್ ವಿಶ್ವನಾಥ್ ಶೀಘ್ರ ಜೆಡಿಎಸ್ ಸೇರ್ಪಡೆ: ವರದಿ

ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಶೀಘ್ರವೇ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಶೀಘ್ರವೇ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ದೈನಿಕವೊಂದು ವರದಿ ಮಾಡಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯಿಂದ ವಿಶ್ವನಾಥ್ ಅವರು ಬೇಸತ್ತಿದ್ದು, ಜೆಡಿಎಸ್‌ ಸೇರ್ಪಡೆಯತ್ತ ಒಲವು ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಸೋಮವಾರ ಸಂಜೆ ಅವರು  ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು ಎಂದು ಹೇಳಲಾಗಿದೆ. ವಿಶ್ವನಾಥ್ ಅವರ ಈ ಭೇಟಿ ಇದೀಗ ತೀವ್ರ ಕುತೂಹಲ ಕೆರಳಿಸಿದ್ದು, ಈ ಮಾತುಕತೆ ಬಳಿಕ ಜೆಡಿಎಸ್‌ ಸೇರ್ಪಡೆ ಖಚಿತವಾಗಿದ್ದು,  ಮೈಸೂರು ನಗರದಲ್ಲಿ ಶಕ್ತಿ ಪ್ರದರ್ಶನದ ಮೂಲಕವೇ ವಿಶ್ವನಾಥ್‌ ಅವರೊಂದಿಗೆ ಹಳೆ ಮೈಸೂರು ಭಾಗದ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಲು ಜೆಡಿಎಸ್‌ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೆರಡು ದಿನಗಳಲ್ಲಿ ಸಮಾವೇಶದ ಸ್ಥಳ ಮತ್ತು ದಿನಾಂಕ ನಿಗದಿಯಾಗಲಿದ್ದು, ಹುಣಸೂರಿನಿಂದ ವಿಶ್ವನಾಥ್‌ ಸ್ಪರ್ಧೆಗೆ ಎಚ್ ಡಿ ದೇವೇಗೌಡ ಅವರು ಒಪ್ಪಿಗೆ ನೀಡಿದ್ದಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಲಿಲ್ಲ-ಮಾತನಾಡಲಾಗುತ್ತಿಲ್ಲ, ತೀವ್ರವಾಗಿ ಸುಟ್ಟು ಹೋದ ಖಮೇನಿ ಮುಖ; ಇರಾನ್ ಪರಮೋಚ್ಛ ನಾಯಕನ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್​..!

ಭಾರತವನ್ನು ‘ನರಕಕೂಪ’ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ

ಸಂಘದಿಂದ ಎರವಲು ಪಡೆದ Ai ಬಳಸುವುದಕ್ಕಿಂತ Oi ಬಳಸಿದರೆ BJP ಕೇಸರಲ್ಲಿ ಮುಳುಗುವುದರಿಂದ ಬಚಾವಾಗಬಹುದು: JDS ಕುರಿತು ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

SCROLL FOR NEXT