ರಾಜಕೀಯ

ಜಂತಕಲ್ ಮೈನಿಂಗ್ ಕೇಸ್: ಮೇ 30 ವರೆಗೂ ಎಚ್ ಡಿಕೆ ಜಾಮೀನು ಅವಧಿ ವಿಸ್ತರಣೆ

Shilpa D
ಬೆಂಗಳೂರು: ಜಂತಕಲ್  ಎಂಟರ್‌ಪ್ರೈಸಸ್‌’ಗೆ ಅಕ್ರಮವಾಗಿ ಅದಿರು ಸಾಗಿಸಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅವಧಿಯನ್ನು ನ್ಯಾಯಾಲಯ ಇದೇ 30ರವರೆಗೆ ವಿಸ್ತರಿಸಿದೆ.
ಇದೇ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಗಂಗಾರಾಂ ಬಡೇರಿಯಾ ಅವರನ್ನು ವಿಶೇಷ ತನಿಖಾ ತಂಡ  (ಎಸ್‌ಐಟಿ) ಬಂಧಿಸಿದ ನಂತರ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ 53ನೇ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೇ 17ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, 23ರವರೆಗೆ ಜಾಮೀನು ನೀಡಿ ವಿಚಾರಣೆ ಮುಂದೂಡಿತ್ತು. ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಧೀಶೆ ವನಮಾಲ ಆನಂದರಾವ್, ಇದೇ 30ಕ್ಕೆ ವಿಚಾರಣೆ ಮುಂದೂಡಿದ್ದಾರೆ
SCROLL FOR NEXT