ಅಂಬರೀಶ್ 
ರಾಜಕೀಯ

ಮಾಜಿ ಸಚಿವ ಅಂಬರೀಶ್ ಒಂದು ವರ್ಷದಿಂದ ಶಾಸಕಾಂಗ ಸಭೆಗೆ ಗೈರು; ಕಾರಣ ಎಸಿ ಆಗೋಲ್ಲ!

ಸರಿಯಾಗಿ ಶಾಸಕಾಂಗ ಸಭೆಗೆ ಬರುತ್ತಿಲ್ಲ ಎಂದು ಮಾಜಿ ವಸತಿ ಸಚಿವ ಅಂಬರೀಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಸಂಪುಟದಿಂದ...

ಬೆಂಗಳೂರು: ಸರಿಯಾಗಿ ಶಾಸಕಾಂಗ ಸಭೆಗೆ ಬರುತ್ತಿಲ್ಲ ಎಂದು ಮಾಜಿ ವಸತಿ ಸಚಿವ ಅಂಬರೀಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಸಂಪುಟದಿಂದ ಕೈಬಿಟ್ಟಿದ್ದರು. ಅಂಬರೀಶ್ ಅವರು ಶಾಸಕಾಂಗ ಸಭೆಗಳಿಗೆ ಗೈರಾಗಲು ಹವಾ ನಿಯಂತ್ರಣ ವ್ಯವಸ್ಥೆ ಕಾರಣ ಎಂದು ಹೇಳಿದ್ದಾರೆ. 
ಶಾಸಕಾಂಗ ಸಭೆಗಳಿಗೆ ಗೈರಾಗುತ್ತಿರುವುದಕ್ಕೆ ಕಾರಣ ತಿಳಿಸುವಂತೆ ವಿಧಾನಸಭೆ ಸ್ಪೀಕರ್ ಕೆಬಿ ಕೋಳಿವಾಡ ಅವರು ಅಂಬರೀಶ್ ಅವರಿಗೆ ಕಳೆದ ವಾರ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಂಬರೀಶ್ ಅವರು ವಿಧಾನಸಭೆ ಮತ್ತು ಕೌನ್ಸಿಲ್ ಹಾಲ್ ನಲ್ಲಿ ಎಸಿಯನ್ನು ಅಳವಡಿಸಲಾಗಿದ್ದು ನನಗೆ ಎಸಿ ಆಗೋಲ್ಲ ಹೀಗಾಗಿ ನಾನು ಯಾವುದೇ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಹೇಳಿದ್ದಾರೆ. 
ಹವಾ ನಿಯಂತ್ರಣ ಕೊಠಡಿಯಲ್ಲಿ ಸುದೀರ್ಘವಾಗಿ ಕುಳಿತುಕೊಳ್ಳಲು ನನ್ನ ಆರೋಗ್ಯ ಸಹಕರಿಸುತ್ತಿಲ್ಲ. ಹೀಗಾಗಿ ನಾನು ಕಳೆದ ಒಂದು ವರ್ಷದಿಂದ ಯಾವುದೇ ಶಾಸಕಾಂಗ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಅಂಬರೀಶ್ ಪ್ರತ್ಯುತ್ತರ ನೀಡಿದ್ದಾರೆ. 
ಶಾಸಕಾಂಗ ಸಭೆಗಳಿಗೆ ಅಂಬರೀಶ್ ಗೈರಾಗುತ್ತಿರುವ ಹಿನ್ನಲೆಯಲ್ಲಿ ಅವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳುತ್ತೀರ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಕೋಳಿವಾಡ ಅವರು ಸಭೆಗಳಿಗೆ ಹಾಜರಾಗದ ಶಾಸಕಾಂಗ ಸದಸ್ಯರ ಸದಸ್ಯತ್ವವನ್ನು ಅಸಿಂಧುಗೊಳಿಸುವ ಯಾವುದೇ ಕಾನೂನು ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT