ಅಂಬರೀಶ್ 
ರಾಜಕೀಯ

ಮಾಜಿ ಸಚಿವ ಅಂಬರೀಶ್ ಒಂದು ವರ್ಷದಿಂದ ಶಾಸಕಾಂಗ ಸಭೆಗೆ ಗೈರು; ಕಾರಣ ಎಸಿ ಆಗೋಲ್ಲ!

ಸರಿಯಾಗಿ ಶಾಸಕಾಂಗ ಸಭೆಗೆ ಬರುತ್ತಿಲ್ಲ ಎಂದು ಮಾಜಿ ವಸತಿ ಸಚಿವ ಅಂಬರೀಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಸಂಪುಟದಿಂದ...

ಬೆಂಗಳೂರು: ಸರಿಯಾಗಿ ಶಾಸಕಾಂಗ ಸಭೆಗೆ ಬರುತ್ತಿಲ್ಲ ಎಂದು ಮಾಜಿ ವಸತಿ ಸಚಿವ ಅಂಬರೀಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಸಂಪುಟದಿಂದ ಕೈಬಿಟ್ಟಿದ್ದರು. ಅಂಬರೀಶ್ ಅವರು ಶಾಸಕಾಂಗ ಸಭೆಗಳಿಗೆ ಗೈರಾಗಲು ಹವಾ ನಿಯಂತ್ರಣ ವ್ಯವಸ್ಥೆ ಕಾರಣ ಎಂದು ಹೇಳಿದ್ದಾರೆ. 
ಶಾಸಕಾಂಗ ಸಭೆಗಳಿಗೆ ಗೈರಾಗುತ್ತಿರುವುದಕ್ಕೆ ಕಾರಣ ತಿಳಿಸುವಂತೆ ವಿಧಾನಸಭೆ ಸ್ಪೀಕರ್ ಕೆಬಿ ಕೋಳಿವಾಡ ಅವರು ಅಂಬರೀಶ್ ಅವರಿಗೆ ಕಳೆದ ವಾರ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಂಬರೀಶ್ ಅವರು ವಿಧಾನಸಭೆ ಮತ್ತು ಕೌನ್ಸಿಲ್ ಹಾಲ್ ನಲ್ಲಿ ಎಸಿಯನ್ನು ಅಳವಡಿಸಲಾಗಿದ್ದು ನನಗೆ ಎಸಿ ಆಗೋಲ್ಲ ಹೀಗಾಗಿ ನಾನು ಯಾವುದೇ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಹೇಳಿದ್ದಾರೆ. 
ಹವಾ ನಿಯಂತ್ರಣ ಕೊಠಡಿಯಲ್ಲಿ ಸುದೀರ್ಘವಾಗಿ ಕುಳಿತುಕೊಳ್ಳಲು ನನ್ನ ಆರೋಗ್ಯ ಸಹಕರಿಸುತ್ತಿಲ್ಲ. ಹೀಗಾಗಿ ನಾನು ಕಳೆದ ಒಂದು ವರ್ಷದಿಂದ ಯಾವುದೇ ಶಾಸಕಾಂಗ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಅಂಬರೀಶ್ ಪ್ರತ್ಯುತ್ತರ ನೀಡಿದ್ದಾರೆ. 
ಶಾಸಕಾಂಗ ಸಭೆಗಳಿಗೆ ಅಂಬರೀಶ್ ಗೈರಾಗುತ್ತಿರುವ ಹಿನ್ನಲೆಯಲ್ಲಿ ಅವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳುತ್ತೀರ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಕೋಳಿವಾಡ ಅವರು ಸಭೆಗಳಿಗೆ ಹಾಜರಾಗದ ಶಾಸಕಾಂಗ ಸದಸ್ಯರ ಸದಸ್ಯತ್ವವನ್ನು ಅಸಿಂಧುಗೊಳಿಸುವ ಯಾವುದೇ ಕಾನೂನು ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

SCROLL FOR NEXT