ಡಿ.ಎಚ್ ಶಂಕರಮೂರ್ತಿ ಮತ್ತು ಎಸ್ .ಆರ್ ಪಾಟೀಲ್ 
ರಾಜಕೀಯ

ಜಾತಿ ಸಮೀಕರಣಕ್ಕೆ ಮುಂದಾದ ಕಾಂಗ್ರೆಸ್: ಪರಿಷತ್ ಸಭಾಪತಿಯಾಗಿ ಎಸ್.ಆರ್. ಪಾಟೀಲ್

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಜಿ ಪರಮೇಶ್ವರ್ ಅವರನ್ನು ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಅಸಮಾಧಾನಗೊಂಡಿರುವ ಡಿ.ಕೆ. ಶಿವಕುಮಾರ್ ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಜಿ ಪರಮೇಶ್ವರ್ ಅವರನ್ನು ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಅಸಮಾಧಾನಗೊಂಡಿರುವ ಡಿ.ಕೆ ಶಿವಕುಮಾರ್ ಮತ್ತು ಎಸ್, ಪಾಟೀಲ್ ಅವರಿಗೆ ಹೊಸ ಜವಾಬ್ದಾರಿ ಕೊಡಲು ಚಿಂತನೆ ನಡೆಸಲಾಗಿದೆ. ಜೊತೆಗೆ ಜಾತಿ ಸಮೀಕರಣದ ಮೇಲೆ ಸದ್ಯ ಖಾಲಿ ಇರುವ ಸಚಿವ ಸ್ಥಾನ ತುಂಬಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿರುವ ಡಿ.ಕೆ ಶಿವಕುಮಾರ್ ಮತ್ತು ಲಿಂಗಾಯತ ಮುಖಂಡ ಎಸ್. ಆರ್ ಪಾಟೀಲ್  ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಹೀಗಾಗಿ ಅವರಿಬ್ಬರಿಗೂ ಸೂಕ್ತ ಸ್ಥಾನ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರನ್ನು ಹುದ್ದೆಯಿಂದ ತೆರವುಗೊಳಿಸಿ ಆ ಸ್ಥಾನಕ್ಕೆ ಎಸ್.ಆರ್ ಪಾಟೀಲ್ ಅವರನ್ನು ನೇಮಿಸಲು ನಿರ್ಧರಿಸಿದ್ದು, ಶಂಕರಮೂರ್ತಿ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ನೋಟಿಸ್ ನೀಡಲಾಗಿದೆ.
ಜೂನ್‌ 5 ರಿಂದ ವಿಧಾನ ಮಂಡಲ ಅಧಿವೇಶನದಲ್ಲಿ ಸಂವಿಧಾನದ ಕಲಂ 183ರ ಅಡಿ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕು ಎಂದು  ಮುಖ್ಯ ಸಚೇತಕ ಐವನ್‌ ಡಿಸೋಜಾ ನೇತೃತ್ವದ ಕಾಂಗ್ರೆಸ್‌ ಸದಸ್ಯರು ಮಂಗಳವಾರವಿಧಾನಪರಿಷತ್‌ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ನೋಟಿಸ್‌ ನೀಡಿದ್ದಾರೆ.
75 ಮಂದಿಯಿರುವ ಪರಿಷತ್ ನಲ್ಲಿ ಕಾಂಗ್ರೆಸ್ 35 ಸದಸ್ಯರನ್ನು ಹೊಂದಿದ್ದು, ಶಂಕರಮೂರ್ತಿ ಅವರನ್ನು ತೆರವುಗೊಳಿಸಲು 13 ಮಂದಿ ಜೆಡಿಎಸ್ ಸದಸ್ಯರ ಬೆಂಬಲ ಕೋರಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ.
ಸದ್ಯ ಎರಡು ಸಚಿವ ಸ್ಥಾನಗಳು ತೆರವಾಗಿದ್ದು, ಜಿ ಪರಮೇಶ್ವರ್ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದರೇ ಮೂರು ಸಚಿವ ಸ್ಥಾನಗಳನ್ನು ತುಂಬಲು ಸಚಿವ ಸಂಪುಟ ವಿಸ್ತರಣೆ ನಡೆಸಲಾಗುವುದು
ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ವಂಚಿತಗೊಂಡು ಅಸಮಾಧಾನಗೊಂಡಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು 2018ರ ವಿಧಾನಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT