ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ರಾಜಕೀಯ

ಲೋಕಾಯುಕ್ತವನ್ನು ಸಿಎಂ ಸಿದ್ದು ಸರ್ಕಾರ 'ಕೈಗೊಂಬೆ' ಮಾಡಿಕೊಂಡಿದೆ: ಅಮಿತ್ ಶಾ

ರಾಜ್ಯದ ಆಡಳಿತಾರೂಢ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಲೋಕಾಯುಕ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಕೈಗೊಂಬೆ ಮಾಡಿಕೊಂಡಿದೆ...

ಬೆಂಗಳೂರು: ರಾಜ್ಯದ ಆಡಳಿತಾರೂಢ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಲೋಕಾಯುಕ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಕೈಗೊಂಬೆ ಮಾಡಿಕೊಂಡಿದೆ ಎಂದು ಗುರುವಾರ ಹೇಳಿದ್ದಾರೆ. 

ಪಕ್ಷದ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಲೋಕಾಯುಕ್ತವನ್ನು ಕೈಗೊಂಬೆ ಮಾಡಿಕೊಂಡಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಭ್ರಷ್ಟರಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 

ಇದೇ ವೇಳೆ ರಾಜ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನ ಕುರಿತಂತೆ ಮಾಹಿತಿ ನೀಡಿರುವ ಅವರು ನಮ್ಮ ಮೆಟ್ರೋಗೆ ಕೇಂದ್ರ ಸರ್ಕಾರ ರೂ.2,617, ಅಮೃತ ಯೋಜನೆಗೆ ರೂ.4,900 ಕೋಟಿ, ಸ್ಮಾರ್ಟ್ ಸಿಟಿ ರೂ.960 ಕೋಟಿ ಹಾಗೂ ರೈಲ್ವೇ ಯೋಜನೆಗಳಿಗೆ ರೂ.2,917 ಕೋಟಿಯನ್ನು ನೀಡಿದೆ. ಆದರೆ, ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳ ಅಡಿಯಲ್ಲಿ ಈ ಹಣ ಜನರಿಗೆ ತಲುಪುತ್ತಿಲ್ಲ. ಕೇಂದ್ರ ನೀಡುತ್ತಿರುವ ಹಣವನ್ನು ಕಾಂಗ್ರೆಸ್ ನಾಯಕರು ಹಾಗೂ ಭ್ರಷ್ಟ ಅಧಿಕಾರಿಗಳು ತಮ್ಮ ಜೇಬಿಗೆ ಹಾಕಿಕೊಳ್ಳುತ್ತಿದ್ದಾರೆ. ಪ್ರತಿಯೊಂದಲ್ಲೂ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಕೇಂದ್ರ ಯೋಜನೆಗಳನ್ನು ಜಾರಿಗೆ ತರಲು ಅಸಹಕಾರ ತೋರಿಸುತ್ತಿದೆ. 

ಕೇಂದ್ರ ಸರ್ಕಾರ ದಲಿತರು, ಆದಿವಾಸಿಗಳು, ಹಿಂದುಳಿದವರು, ಯುವ ಜನಾಂಗದ ಕಲ್ಯಾಣಕ್ಕಾಗಿ 130 ಯೋಜನೆಗಳನ್ನು ಜಾರಿಗೊಳಿಸಿದೆಯಾದರೂ ರಾಜ್ಯದ ಅಸಹಕಾರದಿಂದ ಆ ಯೋಜನೆಗಳು ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಲು ವಿಧೇಕ ಜಾರಿಗೊಳಿಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರ ರಾಜ್ಯಸಭೆಯಲ್ಲಿ ಅಡ್ಡಿಪಡಿಸುತ್ತಿದೆ. ತಾವು ಹಿಂದುಳಿದ ವರ್ಗಗಳ ಹಿತೈಷಿ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಮೌನ ಮುರಿಯಬೇಕಿದೆ ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, 10ಕ್ಕೂ ಹೆಚ್ಚು ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರನ್ನು ಹತ್ಯೆ ಮಾಡಿಲದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇಶದ ರಕ್ಷಣೆ ಹಾಗೂ ಸುರಕ್ಷತೆ ಬೇಕಾಗಿಲ್ಲ. ಕ್ರಿಮಿನಲ್ ಮೊಕದ್ದಮೆ ಇರುವ ಪಿಎಫ್ಐ, ಎಸ್'ಡಿಪಿಐ, ಕೆಎಫ್'ಡಿ ಮೊದಲಾದ ಸಂಘಟನೆಗಳ ಕಾರ್ಯಕರ್ತರನ್ನು ಆರೋಪ ಮುಕ್ತ ಮಾಡುತ್ತಿದ್ದಾರೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT