ಎಚ್.ಡಿ ದೇವೇಗೌಡ 
ರಾಜಕೀಯ

ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ: ನಾನು ಯಾವುದೇ ಗ್ರೀನ್ ಸಿಗ್ನಲ್ ನೀಡಿಲ್ಲ ; ದೇವೇಗೌಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಭವಾನಿ ...

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಭವಾನಿ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡ ನಾನು ಯಾವುದೇ ಗ್ರೀನ್ ಸಿಗ್ನಲ್ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಕನಕಪುರ ವಿಧಾನಾ ಸಭೆ ಕ್ಷೇತ್ರದಲ್ಲಿ  ಜೆಡಿಎಸ್ ಕಾರ್ಯಕರ್ತರ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಮೊಮ್ಮಕ್ಕಳಾದ ಪ್ರಜ್ವಲ್ ಮತ್ತು ನಿಖಿಲ್ ಇಬ್ಬರು ಶೀಘ್ರವೇ ಅಥವಾ ನಂತರದ ದಿನಗಳಲ್ಲಿ ರಾಜಕೀಯಕ್ಕೆ ಬರಬಹುದು, ಅವರ ರಾಜಕೀಯ ಪ್ರವೇಶ ಯಾವಾಗ ಎಂಬುದನ್ನು ನಾನು ನಿರ್ಧರಿಸಲಾರೆ, ನಾನು ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಾನು ಯೋಚಿಸಿರಲಿಲ್ಲ, ಜನ ಅದರ ಬಗ್ಗೆ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಇನ್ನೂ ಕನಕಪುರ ವಿಧಾನಸಭೆ ಕ್ಷೇತ್ರದಿಂದ ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ನ ಡಿ.ಎಂ ವಿಶ್ವನಾಥ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT