ಸುವರ್ಣಸೌಧ 
ರಾಜಕೀಯ

ಬೆಳಗಾವಿ ಅಧಿವೇಶನ: ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ.....

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ವಿಧಾನಸಭೆ ಕಲಾಪವನ್ನು ಸ್ಪೀಕರ್ ಕೆಬಿ ಕೋಳಿವಾಡ ಅವರು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದರು.
ಇಂದು ಬೆಳಗ್ಗೆ ಆರಂಭಗೊಂಡ 10 ದಿನಗಳ 8ನೇ ಚಳಿಗಾಲದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್, ಪತ್ರಕರ್ತೆ ಗೌರಿ ಲಂಕೇಶ್ ಮತ್ತಿತರ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಕಲಾಪವನ್ನು ನಾಳೆಗೆ ಮುಂದೂಡಿದರು.
ಚಳಿಗಾಲದ ಅಧಿವೇಶನದ ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ಶಾಸಕರು, ಸಚಿವರು ಗೈರುಹಾಜರಾಗಿದ್ದರು. ವಿಧಾನಸಭೆ ಕಲಾಪದಲ್ಲಿ ಕೇವಲ 53 ಶಾಸಕರು, ಬೆರಳೆಣಿಕೆಯಷ್ಟು ಸಚಿವರು ಮಾತ್ರ ಭಾಗವಹಿಸಿದ್ದರು.
ಪರಿಷತ್ ಕಲಾಪ ಮಧ್ಯಾಹ್ನ 3ಗಂಟೆಗೆ ಮುಂದೂಡಿಕೆ:
ಕಲಾಪದಲ್ಲಿ ಆಡಳಿತಾರೂಢ ಸರ್ಕಾರದ ಸಚಿವರು ಗೈರು ಹಾಜರಾಗಿದ್ದಕ್ಕೆ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಪರಿಷತ್ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ, ಕೋಲಾಹಲದಿಂದಾಗಿ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT