ಸುವರ್ಣಸೌಧ 
ರಾಜಕೀಯ

ಬೆಳಗಾವಿ ಅಧಿವೇಶನ: ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ.....

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ವಿಧಾನಸಭೆ ಕಲಾಪವನ್ನು ಸ್ಪೀಕರ್ ಕೆಬಿ ಕೋಳಿವಾಡ ಅವರು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದರು.
ಇಂದು ಬೆಳಗ್ಗೆ ಆರಂಭಗೊಂಡ 10 ದಿನಗಳ 8ನೇ ಚಳಿಗಾಲದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್, ಪತ್ರಕರ್ತೆ ಗೌರಿ ಲಂಕೇಶ್ ಮತ್ತಿತರ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಕಲಾಪವನ್ನು ನಾಳೆಗೆ ಮುಂದೂಡಿದರು.
ಚಳಿಗಾಲದ ಅಧಿವೇಶನದ ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ಶಾಸಕರು, ಸಚಿವರು ಗೈರುಹಾಜರಾಗಿದ್ದರು. ವಿಧಾನಸಭೆ ಕಲಾಪದಲ್ಲಿ ಕೇವಲ 53 ಶಾಸಕರು, ಬೆರಳೆಣಿಕೆಯಷ್ಟು ಸಚಿವರು ಮಾತ್ರ ಭಾಗವಹಿಸಿದ್ದರು.
ಪರಿಷತ್ ಕಲಾಪ ಮಧ್ಯಾಹ್ನ 3ಗಂಟೆಗೆ ಮುಂದೂಡಿಕೆ:
ಕಲಾಪದಲ್ಲಿ ಆಡಳಿತಾರೂಢ ಸರ್ಕಾರದ ಸಚಿವರು ಗೈರು ಹಾಜರಾಗಿದ್ದಕ್ಕೆ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಪರಿಷತ್ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ, ಕೋಲಾಹಲದಿಂದಾಗಿ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!