ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ 
ರಾಜಕೀಯ

ಕುಂದಾಪುರ: ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ, ಲಾಠಿಚಾರ್ಚ್

ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಯದಲ್ಲಿ ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿಗ ಕಾರ್ಯಕರ್ತರ ನಡುವೆ.......

ಕುಂದಾಪುರ: ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಯದಲ್ಲಿ ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿಗ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದು ಸಂಘರ್ಷಮಯ ಪರಿಸ್ಥಿತಿ  ಏರ್ಪಟ್ಟಿತ್ತು. 
ಕುಂದಾಪುರದ ನೆಹರೂ ಮೈದಾನದಲ್ಲಿ ನಡೆದ ಸಮಾವೇಶದ ಸಂದರ್ಭ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ, ಹಾಲಾಡಿ ಅವರ ಬೆಂಬಲಿಗರು ವಾಗ್ವಾದಕ್ಕಿಳಿದಿದ್ದರು. ಆ ವೇಳೆ  ಉಭಯ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಲಾಠಿಚಾರ್ಚ್ ಮಾಡಿದ ಘಟನೆ ಜರುಗಿತು.
ಕೆಲವೊಬ್ಬರು ಬ್ಯಾನರ್ ಹಿಡಿದು ಹಾಲಾಡಿ ವಿರುದ್ಧ ಘೋಷಣೆ ಕೂಗಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವೇದಿಕೆಯಲ್ಲಿ ಮಾತನಾಡುತ್ತಾ ಹಿರಂಗವಾಗಿಯೇ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಪರ ಹೇಳಿಕೆ ನೀಡಿದರು. ಈ ಪ್ರಕಾರ ಶಾಸಕರ ವಿರುದ್ಧ ಮಾತನಾಡುವವರಿಗೆ ಬಿಸಿ ಮುಟ್ಟಿಸಿದ್ದರು.
"ಹಾಲಾಡಿಯವರು ಪಕ್ಷಕ್ಕೆ ಬೇಕು, ಇಷ್ಟಪಡುವವರು ಇರಬಹುದು, ಇಲ್ಲವಾದರೆ ಬಿಟ್ಟು ಹೋಗಿ" ಎಂದ ಬಿಎಸ್ ವೈ ಹಾಲಾಡಿ ಶ್ರೀನಿವಾಸ ಶೆತ್ಟರ ವಿರೋಧಿಗಳಿಗೆ ಖಡಕ್ ಉತ್ತರ ನೀಡಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆ ಇಂದು ಕುಂದಾಪುರ, ಬೈಂದೂರು, ಭಟ್ಕಳಗಳನ್ನು ಹಾದು ಹೋಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT