ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ 
ರಾಜಕೀಯ

ಕುಂದಾಪುರ: ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ, ಲಾಠಿಚಾರ್ಚ್

ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಯದಲ್ಲಿ ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿಗ ಕಾರ್ಯಕರ್ತರ ನಡುವೆ.......

ಕುಂದಾಪುರ: ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಯದಲ್ಲಿ ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿಗ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದು ಸಂಘರ್ಷಮಯ ಪರಿಸ್ಥಿತಿ  ಏರ್ಪಟ್ಟಿತ್ತು. 
ಕುಂದಾಪುರದ ನೆಹರೂ ಮೈದಾನದಲ್ಲಿ ನಡೆದ ಸಮಾವೇಶದ ಸಂದರ್ಭ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ, ಹಾಲಾಡಿ ಅವರ ಬೆಂಬಲಿಗರು ವಾಗ್ವಾದಕ್ಕಿಳಿದಿದ್ದರು. ಆ ವೇಳೆ  ಉಭಯ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಲಾಠಿಚಾರ್ಚ್ ಮಾಡಿದ ಘಟನೆ ಜರುಗಿತು.
ಕೆಲವೊಬ್ಬರು ಬ್ಯಾನರ್ ಹಿಡಿದು ಹಾಲಾಡಿ ವಿರುದ್ಧ ಘೋಷಣೆ ಕೂಗಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವೇದಿಕೆಯಲ್ಲಿ ಮಾತನಾಡುತ್ತಾ ಹಿರಂಗವಾಗಿಯೇ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಪರ ಹೇಳಿಕೆ ನೀಡಿದರು. ಈ ಪ್ರಕಾರ ಶಾಸಕರ ವಿರುದ್ಧ ಮಾತನಾಡುವವರಿಗೆ ಬಿಸಿ ಮುಟ್ಟಿಸಿದ್ದರು.
"ಹಾಲಾಡಿಯವರು ಪಕ್ಷಕ್ಕೆ ಬೇಕು, ಇಷ್ಟಪಡುವವರು ಇರಬಹುದು, ಇಲ್ಲವಾದರೆ ಬಿಟ್ಟು ಹೋಗಿ" ಎಂದ ಬಿಎಸ್ ವೈ ಹಾಲಾಡಿ ಶ್ರೀನಿವಾಸ ಶೆತ್ಟರ ವಿರೋಧಿಗಳಿಗೆ ಖಡಕ್ ಉತ್ತರ ನೀಡಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆ ಇಂದು ಕುಂದಾಪುರ, ಬೈಂದೂರು, ಭಟ್ಕಳಗಳನ್ನು ಹಾದು ಹೋಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT