ಆರೋಗ್ಯ ಸಚಿವ ರಮೇಶ್ ಕುಮಾರ್ 
ರಾಜಕೀಯ

ಕೆಪಿಎಂಇ ತಿದ್ದುಪಡಿ ವಿಧೇಯಕ ಜನ ವಿರೋಧಿ ಎಂದು ತೀರ್ಮಾನವಾದರೆ, ನಿವೃತ್ತಿ ಪಡೆಯುವೆ: ರಮೇಶ್ ಕುಮಾರ್

ಖಾಸಗಿ ವೈದ್ಯಕೀಯ ತಿದ್ದುಪಡಿ ವಿಧೇಯಕದ ಸಾರ್ವಜನಿಕ ವಿರೋಧಿ ಎಂಬುದು ಸಾಬೀತಾದರೆ, ಆ ಕ್ಷಣವೇ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆದುಕೊಳ್ಳುತ್ತೇನೆಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಮಂಗಳವಾರ...

ಬೆಂಗಳೂರು: ಖಾಸಗಿ ವೈದ್ಯಕೀಯ ತಿದ್ದುಪಡಿ ವಿಧೇಯಕದ ಸಾರ್ವಜನಿಕ ವಿರೋಧಿ ಎಂಬುದು ಸಾಬೀತಾದರೆ, ಆ ಕ್ಷಣವೇ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆದುಕೊಳ್ಳುತ್ತೇನೆಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. 
ಮಂಗಳವಾರ ಶೂನ್ಯ ವೇಳೆಯಲ್ಲಿ ಖಾಸಗಿ ವೈದ್ಯಕೀಯ ತಿದ್ದುಪಡಿ ವಿದೇಯಕ ಕುರಿತು ಪ್ರಸ್ತಾಪಿಸಿದ ಬಿಜೆಪಿಯ ಮಹಾಂತೇಶ್ ಕವಟಗಿಮಠ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ಖಾಸಗಿ ವೈದ್ಯಕೀಯ ತಿದ್ದುಪಡಿ ವಿದೇಯಕವು ಜನ ವಿರೋಧಿ ಎಂದು ಆರೋಪಿಸಲಾಗುತ್ತಿದೆ. ಸೈದ್ಧಾಂತಿಕವಾಗಿ ಆರ್'ಎಸ್ಎಸ್ ನಿಲುವನ್ನು ವಿರೋಧಿಸುತ್ತೇನೆ. ಆದರೂ, ಆರ್'ಎಸ್ಎಸ್ ಸಭೆಗೆ ಕರೆಯಿರಿ. ಅಲ್ಲಿಯೇ ಇಬ್ಬರೂ ಸಾಧಕರ ಹಾಗೂ ಬಾಧಕಗಳು ಕುರಿತು ಚರ್ಚೆ ನಡೆಸೋಣ. ಸಬೆಯಲ್ಲಿ ತಿದ್ದುಪಡಿ ವಿಧೇಯಕ ಜನವಿರೋಧಿ ಎಂದು ತೀರ್ಮಾನವಾದರೆ, ನಿವೃತ್ತಿ ಪಡೆದುಕೊಳ್ಳುತ್ತೇನೆಂದು ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಸವಾಲು ಹಾಕಿದ್ದಾರೆ. 
ಇದೇ ವೇಳೆ ತಮ್ಮನ್ನು ಕೊಲೆಗಡುಕ ಎಂದು ಆರೋಪಿಸಿದ್ದ ಈಶ್ವರಪ್ಪ ವಿರುದ್ಧ ಗುಡುಗಿರುವ ಅವರು, ನಾನು ಕೊಲೆಗಡುಕ ಎಂಬುದಕ್ಕೆ ಸಾಕ್ಷಿಗಳಿದ್ದರೆ ತೋರಿಸಲಿ. ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂಬುದನ್ನೂ ಹೇಳಬೇಕು ಎಂದು ತಿಳಿಸಿದ್ದಾರೆ. 
ಕೊಲೆಗಡುಕ ಎಂಬ ಪದ ಕೇಳಿ ತಮ್ಮ ಕುಟುಂಬಸ್ಥರು ಕರೆ ಮಾಡಿ ವಿಚಾರಿಸಿದರು. ನನಗೆ ಮಕ್ಕಳಿಲ್ಲ ಎಂದು ಸಹ ಹೇಳಿದ್ದಾರೆ. ಆದರೆ, ನನಗೆ ಇಬ್ಬರು ಮಕ್ಕಳಿದ್ದು, ಇಬ್ಬರೂ ಸುಶಿಕ್ಷಿತರಾಗಿದ್ದಾರೆ. ರಾಜಕೀ ಜೀವನದಲ್ಲಿರುವುದರಿಂದ ನಮಗೆ ಮಾನ ಇಲ್ಲದಿರಬಹುದು. ಆದರೆ, ಮಕ್ಕಳು ಮರ್ಯಾದೆಯಿಂದ ಜೀವನವನ್ನು ನಡೆಸುತ್ತಿದ್ದಾರೆಂದು ಟಾಂಗ್ ಕೊಟ್ಟಿದ್ದಾರೆ. 
ಬಳಿಕ ವೈದ್ಯರ ಪ್ರತಿಭಟನೆಯಿಂದಾಗಿ ರಾಜ್ಯದಲ್ಲಿ ಈ ವರೆಗೂ 6 ಮಂದಿ ಬಲಿಯಾಗಿರುವ ಹಿನ್ನಲೆಯಲ್ಲಿ ವಿಷಾದ ವ್ಯಕ್ತಪಡಿಸಿರುವ ಅವರು, ಮೃತ ಕುಟುಂಬದವರಲ್ಲಿ ಕ್ಷಮೆಯಾಚನೆ ಮಾಡುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT