ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ 
ರಾಜಕೀಯ

ವಕೀಲರಿಗೆ ಬೆದರಿಕೆ ಆರೋಪ: ಸಚಿವ ವಿನಯ್ ಕುಲಕರ್ಣಿ ವಿರುದ್ಧ ಹರಿಹಾಯ್ದ ವಿಪಕ್ಷಗಳು

ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಕೀಲರಿಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಅವರ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು ಧರಣಿ ನಡೆಸಿದ...

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಕೀಲರಿಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಅವರ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು ಧರಣಿ ನಡೆಸಿದ ಹಿನ್ನಲೆಯಲ್ಲಿ ಕೊನೆಯ ದಿನದ ಕಲಾಪ ಸಂಪೂರ್ಣವಾಗಿ ಆಹುತಿಯಾಯಿತು. 
ಧಾರವಾಡ ಜಿಲ್ಲೆಯ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಸಚಿವ ವಿನಯ್ ಕುಲಕರ್ಣಿಯವರು ಹಸ್ತಕ್ಷೇ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಸದಸ್ಯರು ಉಭಯ ಸದನಗಳಲ್ಲಿ ವಿಷಯ ಪ್ರಸ್ತಾಪ ಮಾಡಿದರು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಸದನದಲ್ಲಿ ಸರಣಿ ಆರಂಭಿಸಿದ್ದರು. ಆದರೆ, ಪ್ರಶ್ನೋತ್ತರದ ಬಳಿಕ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಧ್ಯಕ್ಷರು ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ.
ಬಿಜೆಪಿ ಸದಸ್ಯರು ತೀವ್ರವಾಗಿ ಧರಣಿ ನಡೆಸಿದ ಹಿನ್ನಲೆಯಲ್ಲಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು. ಕೊನೆಗೂ ಬಿಜೆಪಿ ಸದಸ್ಯರು ಧರಣಿಯನ್ನು ಹಿಂದಕ್ಕೆ ತೆಗೆದುಕೊಳ್ಳದ ಕಾರಣ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಲಾಯಿತು. 
ಇನ್ನು ವಿಧಾನಪರಿಷತ್ ನಲ್ಲಿಯೂ ಪ್ರಶ್ನೋತ್ತರ ಕಲಾಪದ ಬಳಿಕ ಚರ್ಚೆಗೆ ಅವಕಾಶ ಕೋರಿ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಬಳಿಕ ವಿನಯ್ ಕುಲಕರ್ಣಿಯವರನ್ನು ಸಮರ್ಥಿಸಿಕೊಂಡು ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು, ಯೋಗೇಶ್ ಗ1ಡ ಅವರ ಕೊಲೆಗೆ ಭೂ ತಕರಾರು ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. 
ಬಳಿಕ ಸರ್ಕಾರದ ವಿರುದ್ಧ ಆರೋಪ ಮಾಡಿದ ವಿಪಕ್ಷ ನಾಯಕ ಶೆಟ್ಟರ್ ಅವರು, ಈಗಾಗಲೇ ಒಬ್ಬರು ಸಚಿಚವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಯೋಗೇಸ್ ಗೌಡ ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ವಿ್ಯ್ ಕುಲಕರ್ಣಿಯವರು ಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ. ಇದೇ ವೇಳೆ ಅರ್ಕಾವತಿ ಲೇಔಟ್ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. 
ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರಿಗೆ ವಿನಯ್ ಕುಲಕರ್ಣಿಯವರು ಬೆದರಿಕೆ ಹಾಕಿರುವ ಆಡಿಯೋವೊಂದು ನಿನ್ನೆಯಷ್ಟೇ ಬಹಿರಂಗಗೊಂಡಿತ್ತು. ಯುವ ವಕೀಲ ಆನಂದ ಬಾಡಿ ಅವರಿಗೆ ಸಚಿವ ಕುಲಕರ್ಣಿಯವರು ನ.20 ರಂದು ದೂರವಾಣಿ ಮೂಲಕ ಕರೆ ಮಾಡಿದ್ದು ಎನ್ನಲಾಕಿರುವ 14, 31 ನಿಮಿಷಗಳ ಸಂಭಾಷಣೆ ಆಡಿಯೋವೊಂದು ಖಾಸಗಿ ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ