ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ 
ರಾಜಕೀಯ

ವಿದ್ಯುತ್ ಖರೀದಿ ಕುರಿತು ಬಿಎಸ್'ವೈರಿಂದ ಜನರಿಗೆ ತಪ್ಪು ಮಾಹಿತಿ: ಡಿಕೆ ಶಿವಕುಮಾರ್

ವಿದ್ಯುತ್ ಖರೀದಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜನರನ್ನು ಹಾದಿಗೆ ಎಳೆಯುತ್ತಿದ್ದಾರೆಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ...

ಹುಬ್ಬಳ್ಳಿ: ವಿದ್ಯುತ್ ಖರೀದಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜನರನ್ನು ಹಾದಿಗೆ ಎಳೆಯುತ್ತಿದ್ದಾರೆಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತ ಮಾತನಾಡಿರುವ ಅವರು ಕೇಂದ್ರ ಸರ್ಕಾರ ಪ್ರತಿ ಯುನಿಟ್'ರೂ.2.50 ದರದಂತೆ ವಿದ್ಯುತ್ ಪೂರೈಸಲು ಸಿದ್ದವಿದ್ದರೂ ರಾಜ್ಯ ಸರ್ಕಾರ ವಿದ್ಯುತ್ ಖರೀದಿಗೆ ಹಿಂದೇಟು ಹಾಕುತ್ತುದೆ ಎಂದು ಯಡಿಯೂರಪ್ಪ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ. 
ಯಡಿಯೂರಪ್ಪ ಅವರು ರೂ.2.50 ದರಕ್ಕೆ ಪ್ರತಿ ಯುನಿಟ್ ವಿದ್ಯುತ್ ಕೊಡಿಸಲು ಸಿದ್ದವಾದರೆ, ರಾಜ್ಯ ಸರ್ಕಾರ ವಿದ್ಯುತ್ ಖರೀದಿಗೆ ಈ ವರೆಗೂ ಮಾಡಿಕೊಂಡಿಲುವ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸಿ, ಕೇವಲ ಕೇಂದ್ರದಿಂದ ವಿದ್ಯುತ್ ಖರೀದಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ರೂ.2.50 ದರಕ್ಕೆ ಪ್ರತಿ ಯುನಿಟ್ ವಿದ್ಯುತ್ ಕೊಡಿಸಲು ಸಿದ್ದವಾದರೆ, ರಾಜ್ಯ ಸರ್ಕಾರ ವಿದ್ಯುತ್ ಖರೀದಿಗೆ ಈ ವರೆಗೂ ಮಾಡಿಕೊಂಡಿಲುವ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸಿ, ಕೇವಲ ಕೇಂದ್ರದಿಂದ ವಿದ್ಯುತ್ ಖರೀದಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ. 

ಶೀಘ್ರದಲ್ಲಿಯೇ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆಯುತ್ತೇನೆ. ತಮ್ಮ ನೇತೃತ್ವದಲ್ಲಿ ಸಭೆಯೊಂದನ್ನು ನಡೆಸುವಂತೆ ಹಾಗೂ ಸಭೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇನೆ. ಇಷ್ಟೊಂದು ಕಡಿಮೆ ದರದಲ್ಲಿ ವಿದ್ಯುತ್ ದೊರೆಯುವುದಾದರೆ ನಮಗೆ ಬಹಳ ಸಂತೋಷವಾಗುತ್ತದೆ. 

ಯಡಿಯೂರಪ್ಪ ಅವರು ರಾಜಕೀಯ ಪ್ರೇರಿತವಾಗಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ. ಒಂದು ವೇಳೆ ಯುನಿಟ್ ಗೆ ರೂ.2.50ಕ್ಕೆ ವಿದ್ಯುತ್ ದೊರೆಯುವುದಾದರೆ ಖರೀದಿ ಮಾಡಲು ನಾವು ಸಿದ್ಧವಿದ್ದೇವೆಂದಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ರೂ.5.08ರಂತೆ 900 ಮೆಗಾ ವ್ಯಾಟ್ ವಿದ್ಯುತ್ ನ್ನು ಖರೀದಿ ಮಾಡಿತ್ತು. ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ಇಲಾಖೆ ಸಾಕಷ್ಟು ಶ್ರಮ ಪಡುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!