ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ 
ರಾಜಕೀಯ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಇಬ್ಬರು ಸಚಿವರ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಒತ್ತಾಯ

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲಕರ್ಣಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...

ಬೆಂಗಳೂರು; ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲಕರ್ಣಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ನ್ಯಾಯಯುತ ತನಿಖೆ ನಡೆಯಬೇಕೆಂದರೆ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಹೇಳಿದ್ದಾರೆ. 
ಕಲುಕರ್ಣಿ ಹಾಗೂ ಜಾರ್ಜ್ ಅವರು ಅಧಿಕಾರದಲ್ಲಿದ್ದು, ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧದ ಸಾಕ್ಷ್ಯಾಧಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇಬ್ಬರೂ ಸಚಿವರು ಅಧಿಕಾರದಲ್ಲಿರುವವರೆಗೂ ನ್ಯಾಯಯುತ ತನಿಖೆ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ತಮ್ಮ ರಾಜಕೀಯ ತಂತ್ರಗಳಿಗೆ ಬಳಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ. 
ಅಲ್ಲದೆ, ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT