ಸೌಭಾಗ್ಯ ಬಸವರಾಜನ್ 
ರಾಜಕೀಯ

ಕುರ್ಚಿ ಬಿಟ್ಟುಕೊಡದ ಚಿತ್ರದುರ್ಗ ಜಿ.ಪಂ ಅಧ್ಯಕ್ಷೆ ಸೌಭಾಗ್ಯ ಕಾಂಗ್ರೆಸ್ ನಿಂದ ಉಚ್ಛಾಟನೆ

ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ನಿರಾಕರಿಸುತ್ತಿರುವ ಸೌಭಾಗ್ಯ ಬಸವರಾಜನ್ ಅವರನ್ನು ಪಕ್ಷ....

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ನಿರಾಕರಿಸುತ್ತಿರುವ ಸೌಭಾಗ್ಯ ಬಸವರಾಜನ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದ ಬುಧವಾರ ಉಚ್ಛಾಟಿಸಲಾಗಿದೆ.
ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯಿಸಿ ಕಳೆದ ನಾಲ್ಕು ತಿಂಗಳಿಂದ ಸೌಭಾಗ್ಯ ಬಸವರಾಜನ್ ಅವರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಇದ್ಯಾವುದನ್ನೂ ಲೆಕ್ಕಿಸದೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿರುವ ಸೌಭಾಗ್ಯ ಅವರನ್ನು ಇಂದು ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ವೇಳೆ ಪಕ್ಷದ ಮುಖಂಡರು ಮತ್ತು ಹಿರಿಯರ ಸಮ್ಮುಖದಲ್ಲಿ ನಡೆದ ಸಭೆಯ ಒಪ್ಪಂದಂತೆ 15 ತಿಂಗಳ ಅಧಿಕಾರಾವಧಿ ನಂತರವೂ ಅಧ್ಯಕ್ಷ ಸ್ಥಾನಬಿಟ್ಟುಕೊಡದೇ, ಮುಖಂಡರ ಸೂಚನೆಗೂ ಸ್ಪಂದಿಸದ ಕಾರಣ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನುರದ್ದುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ವಿ.ವೈ.ಘೋರ್ಪಡೆ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಐದು ವರ್ಷದ ಅವಧಿಯ ಅಧಿಕಾರವನ್ನು ತಲಾ 15 ತಿಂಗಳಿನಂತೆ ನಾಲ್ವರು ಮಹಿಳೆಯರಿಗೆ ಹಂಚಿಕೆ ಒಡಂಬಡಿಕೆ ಮಾಡಲಾಗಿತ್ತು. ಮೊದಲ ಅವಧಿಗೆ ಅಧ್ಯಕ್ಷ ಸ್ಥಾನವನ್ನು ಸೌಭಾಗ್ಯ ಬಸವರಾಜನ್ ಅವರು ಅಲಂಕರಿಸಿದ್ದರು. ಅವಧಿ ಮುಗಿದರೂ ಸ್ಥಾನ ಬಿಟ್ಟುಕೊಡದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದ್ದು, ಇದರೊಂದಿಗೆ ಅಧ್ಯಕ್ಷ ಸ್ಥಾನಕ್ಕಾಗಿ ಕಳೆದ ನಾಲ್ಕು ತಿಂಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆಬಿದ್ದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT