ವಿಜಯ ಶಂಕರ್ 
ರಾಜಕೀಯ

ಕಾಂಗ್ರೆಸ್ ಸೇರ್ಪಡೆ ವದಂತಿಯ ನಡುವೆಯೂ ಬಿಜೆಪಿ ರ್ಯಾಲಿಯಲ್ಲಿ ಸಿ.ಎಚ್. ವಿಜಯ ಶಂಕರ್

ಸಿಎಂ ಸಿದ್ದರಾಮಯ್ಯ ಜೊತೆ ಮಾಜಿ ಸಂಸದ ವಿಜಯ ಶಂಕರ್ ಇದ್ದ ಫೋಟೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಜೊತೆಗೆ...

ಮೈಸೂರು: ಸಿಎಂ ಸಿದ್ದರಾಮಯ್ಯ ಜೊತೆ  ಮಾಜಿ ಸಂಸದ ವಿಜಯ ಶಂಕರ್ ಇದ್ದ ಫೋಟೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಜೊತೆಗೆ ವಿಜಯ ಶಂಕರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಯೂ ಹಬ್ಬಿತ್ತು.ಆದರೆ ಭಾನುವಾರ ಬಿಜೆಪಿ ಬಿಜೆಪಿ ರೈತ ಮೋರ್ಚಾ ಹಮ್ಮಿಕೊಂಡಿದ್ದ ರೈತರ ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಎಲ್ಲಾ ಊಹಾ ಪೋಹಗಳಿಗೂ ತೆರೆ ಎಳೆದಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಜಯ ಶಂಕರ್,  ಒಂದು ವರ್ಷದ ಹಿಂದೆ,  ರಾಕೇಶ್ ಸಿದ್ದರಾಮಯ್ಯ ಅವರ 11ನೇ ದಿನದ ಕಾರ್ಯಕ್ರಮದ ವೇಳೆ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ, ಅಂದು ಸಿಎಂ ಜೊತೆಗೆ ತೆಗಿಸಿಕೊಂಡಿದ್ದ ಫೋಟೋ ಈಗ ವೈರಲ್ ಆಗಿದೆ, ಅದಾದ ನಂತರ ನಾನು ಸಿಎಂ ಅವರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. 
ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಂಬಂಧ ವದಂತಿಯನ್ನು ನಿರಾಕರಿಸಲೂ ಇಲ್ಲ, ಅಥವಾ ಸ್ಫಷ್ಟನೆ ಕೂಡ ನೀಡಲೂ ಇಲ್ಲ,  ಕಳೆದ 30 ವರ್ಷಗಳಿಂದ ಪಕ್ಷ ನನಗೆ ಉತ್ತಮ ಅವಕಾಶ ನೀಡಿದೆ, ಆದರೆ ಕೆಲವೊಬ್ಬ ನಾಯಕರಿಂದ ನನಗೆ ನೋವುಂಟಾಗಿದೆ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ನನ್ನನ್ನು ಕಳೆದ ಬಾರಿ ಬಲವಂತವಾಗಿ ನನ್ನನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಯಿತು ಎಂದು ತಿಳಿಸಿದರು.
ಪಕ್ಷದ ಹಲವು ಹಿರಿಯರು ತಮ್ಮ ಜೊತೆ ಸಮಾಲೋಚಿಸಿದ್ದು,  ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ವಿವರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT