ಕೆ.ಮುರುಳೀಧರ ರಾವ್ 
ರಾಜಕೀಯ

ಬೆಂಗಳೂರು: ನವೆಂಬರ್ 2 ರಂದು ಬಿಜೆಪಿ ಪರಿವರ್ತನಾ ಯಾತ್ರೆಗೆ 75 ಸಾವಿರ ಬೈಕ್ ಗಳು!

ನವೆಂಬರ್ 2 ರಂದು ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯಲ್ಲಿ ಮಾರು 75 ಸಾವಿರ ಬೈಕ್ ಗಳಲ್ಲಿ ರ್ಯಾಲಿ

ಬೆಂಗಳೂರು: ನವೆಂಬರ್ 2 ರಂದು ಬಿಜೆಪಿ ಹಮ್ಮಿಕೊಂಡಿರುವ  ಪರಿವರ್ತನಾ ಯಾತ್ರೆಯಲ್ಲಿ ಸುಮಾರು 75 ಸಾವಿರ ಬೈಕ್ ಗಳಲ್ಲಿ ರ್ಯಾಲಿ ನಡೆಯಲಿದೆ.
ಕಳೆದ ತಿಂಗಳು ಮಂಗಳೂರು ಚಲೋಗೆ ಪೂರಕವಾಗಿ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿಯನ್ನು ನಿರ್ಬಂಧಿಸಿತ್ತು.  ದಕ್ಷಿಣ ಕರ್ನಾಟಕದ  27 ಸಾವಿರ ಬೂತ್ ಗಳಿಂದ ಮೂರು ಬೈಕ್ ಗಳಲ್ಲಿ ಆರು ಕಾರ್ಯಕರ್ತರು ತೆರಳಲಿದ್ದು, ಸುಮಾರು 1.60 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರ್ಯಯಾಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಬೈಕ್ ರ್ಯಾಲಿ ತುಮಕೂರು ರಸ್ತೆಯ ಬಿಐಸಿಸಿ ಮೈದಾನಕ್ಕೆ ಆಗಮಿಸಲಿದೆ ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಪರುಳಿಧರ ರಾವ್ ಹೇಳಿದ್ದಾರೆ. 
ಯಾತ್ರೆ ನಡೆಯುವ ಪ್ರತಿಯೊಂದು ದಿನವೂ  ರಾಜ್ಯ ಸರ್ಕಾರದ ಒಂದೊಂದು ಹಗರಣವನ್ನು ಪಕ್ಷ ಬಯಲುಗೊಳಿಸಲಿದೆ. ತಮ್ಮ ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂಬ ವಿಶ್ವಾಸ ಇದ್ದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ. ಬೀದಿಯಲ್ಲೇ ಚರ್ಚೆ ಮಾಡಲು ಪಕ್ಷ ಸಿದ್ಧ’ ಎಂದು ಸವಾಲು ಹಾಕಿದರು.
ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೋಳ್ಳಲಿದ್ದಾರೆ.  ಒಂದು ವೇಳೆ ಕಾಂಗ್ರೆಸ್ ಸರ್ಕಾರ ರ್ಯಾಲಿಯನ್ನು ಮತ್ತೆ ನಿರ್ಬಂಧಿಸಿದರೇ  ಮೊದಲ ದಿನವೇ ನಮ್ಮ ಯಾತ್ರೆ ಯಶಸ್ವಿಯಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT