ಡಿಕೆಶಿ-ಎಚ್ ಡಿಕೆ ಭೇಟಿ 
ರಾಜಕೀಯ

ಬಿಜೆಪಿ ವಿರುದ್ಧ ಸೆಡ್ಡು ಹೊಡೆಯಲು ಡಿಕೆಶಿ-ಎಚ್ ಡಿಕೆ ಭೇಟಿ!

ಅಚ್ಚರಿ ಎಂಬಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ತಮ್ಮ ರಾಜಕೀಯ ಎದುರಾಳಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಅಚ್ಚರಿ ಎಂಬಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ತಮ್ಮ ರಾಜಕೀಯ ಎದುರಾಳಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ನಗರದ ಜೆಪಿ ನಗರದಲ್ಲಿರುವ ಕುಮಾರ ಸ್ವಾಮಿ ಅವರ ನಿವಾಸಕ್ಕೆ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಉಭಯ ನಾಯಕರು ಸುಮಾರು ಒಂದು ಗಂಟೆ ಕಾಲ ಸಮಾಲೋಚನೆ ನಡೆಸಿದ್ದಾರೆ ಎಂದು  ತಿಳಿದುಬಂದಿದೆ. ರಾಜ್ಯ ರಾಜಕೀಯದಲ್ಲಿ ಬದ್ಧ ಎದುರಾಳಿಗಳು ಎಂದೇ ಬಿಂಬಿತವಾಗಿರುವ ಡಿ.ಕೆ.ಶಿವಕುಮಾರ್‌ ಹಾಗೂ ಎಚ್‌. ಡಿ.ಕುಮಾರಸ್ವಾಮಿ ಭೇಟಿ ರಾಜಕೀಯ ವಲಯದಲ್ಲಿ ಒಂದಷ್ಟು ಚರ್ಚೆಗೂ ಗ್ರಾಸವಾಗಿದೆ. ಆದರೆ,  ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಚಿಸಲಾಗಿರುವ ವಿದ್ಯುತ್‌ ಖರೀದಿ ಹಗರಣ ಸಂಬಂಧ ಸದನ ಸಮಿತಿಯ ವರದಿ ಅಕ್ಟೋಬರ್ 30ರಂದು ಸಲ್ಲಿಸಬೇಕಿದ್ದು, ಆ ಸಮಿತಿ ಸದಸ್ಯರೂ ಆಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರ ಸಹಿ  ಪಡೆಯಲು ಶಿವಕುಮಾರ್‌ ಬಂದಿದ್ದರು ಎಂದು ತಿಳಿದುಬಂದಿದೆ.
ಇದೇ ಸಂದರ್ಭದಲ್ಲಿ ಉಭಯ ನಾಯಕರು ಪರಸ್ಪರರ ಆರೋಗ್ಯ ವಿಚಾರಿಸಿದ್ದು, ಈ ವೇಳೆ ವಿದ್ಯುತ್ ಖರೀದಿ ಅಕ್ರಮದ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ. ಇನ್ನು ವಿದ್ಯುತ್‌ ಖರೀದಿ ಹಗರಣಕ್ಕೆ ಸಂಬಂಧಿಸಿದ ಸದನ  ಸಮಿತಿ ಸದಸ್ಯ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದರು. ಆದರೆ ಅದು ಅಂಗೀಕಾರವಾಗದ ಕಾರಣ ಸದಸ್ಯರಾಗಿ ಮುಂದುವರಿದಿದ್ದರು. ಹೀಗಾಗಿ, ವರದಿ ಸಲ್ಲಿಸಲು ಸಮಿತಿ ಸದಸ್ಯರ ಸಹಿ ಅಗತ್ಯವಾಗಿತ್ತು. ಇದೇ  ಕಾರಣಕ್ಕೆ ಡಿಕೆಶಿ ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ್ದರು ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗಿ ಮಾಹಿತಿ ನೀಡಿರುವ ಇಂಧನ ಕುಮಾರಸ್ವಾಮಿ ಅವರು, "ವಿದ್ಯುತ್‌ ಖರೀದಿ ಅಕ್ರಮಗಳನ್ನು ದಾಖಲೆ ಸಮೇತ ಸಂಗ್ರಹಿಸಿ ಎರಡು ತಿಂಗಳ ಹಿಂದೆಯೇ ಸಮಿತಿಗೆ ಸಲ್ಲಿಸಿದ್ದೆ. ಇದರಿಂದ ಸರ್ಕಾರಕ್ಕೆ ಆದ  ಸಾವಿರಾರು ಕೋಟಿ ರೂ. ನಷ್ಟದ ಬಗ್ಗೆಯೂ ಅಂಕಿ-ಅಂಶ ನೀಡಿದ್ದೆ. ಈ ಅಂಶಗಳನ್ನೂ ಸೇರಿಸಿ ಅಧಿಕಾರಿಗಳು ಅಂತಿಮ ವರದಿ ಸಿದ್ಧಪಡಿಸಿದ್ದಾರೆಂದು ಶಿವಕುಮಾರ್‌ ಹೇಳಿದರು. ಅಂತೆಯೇ ಅಂತಿಮ ಸಭೆಯಲ್ಲಿ ಪಾಲ್ಗೊಳ್ಳಲು  ಆಹ್ವಾನ ನೀಡಿದರು ಎಂದು ಹೇಳಿದರು. 
ಜಾರ್ಜ್ ಬೆಂಬಲಕ್ಕೆ ನಿಂತ ಎಚ್ ಡಿಕೆ
ಇನ್ನು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅವರ ವಿರುದ್ಧ ಸಿಬಿಐ ಎಫ್ ಐಆರ್‌ ದಾಖಲಿಸಿರುವ ಸಂಬಂಧ ಪ್ರತಿಕ್ರಿಯಿಸಿದ ಅವರು, ಎಫ್ ಐಆರ್ ದಾಖಲಿಸಿದ ಮಾತ್ರಕ್ಕೆ ಜಾರ್ಜ್‌ ರಾಜೀನಾಮೆ ಕೊಡಬೇಕಿಲ್ಲ ಎಂದು  ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT