ಸಿ.ಎಚ್ ವಿಜಯ್ ಶಂಕರ್ 
ರಾಜಕೀಯ

ಬಿಜೆಪಿ ತೊರೆದ ಮಾಜಿ ಸಚಿವ ಸಿ.ಎಚ್. ವಿಜಯ್ ಶಂಕರ್

ಕುರುಬ ಸಮುದಾಯದ ನಾಯಕ, ಮಾಜಿ ಸಚಿವ ಸಿ.ಎಚ್‌.ವಿಜಯ್‌ ಶಂಕರ್‌ ಅವರು ಇಂದು ಬಿಜೆಪಿ ತೊರೆದಿದ್ದಾರೆ.

ಬೆಂಗಳೂರು: ಕುರುಬ ಸಮುದಾಯದ ನಾಯಕ, ಮಾಜಿ ಸಚಿವ ಸಿ.ಎಚ್‌.ವಿಜಯ್‌ ಶಂಕರ್‌ ಅವರು ಇಂದು ಬಿಜೆಪಿ ತೊರೆದಿದ್ದಾರೆ. 
ರಾಜ್ಯ ಬಿಜೆಪಿಯ ರೈತ ಮೋರ್ಚ ರಾಜ್ಯಾಧ್ಯಕ್ಷರಾಗಿದ್ದ ವಿಜಯ್ ಶಂಕರ್ ತಮ್ಮ ರಾಜೀನಾಮೆಯನ್ನು ಬಿ ಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.
ಹಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ವಿಜಯ್‌ ಶಂಕರ್ ಮೊನ್ನೆ ಮೈಸೂರಿನಲ್ಲಿ ನಡೆದ ಬೃಹತ್ ರೈತ ಸಮಾವೇಶದಲ್ಲಿಯೂ ಭಾಗವಹಿಸಿರಲಿಲ್ಲ. ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದ ಇವರ ರಾಜೀನಾಮೆಯ ಕಾರಣ ಈ ಭಾಗದಲ್ಲಿ ಬಿಜೆಪಿಗೆ ತುಸು ಹಿನ್ನೆಡೆಯಾಗಿದೆ.
ಹುಣಸೂರಿನಿಂದ 1994 ,98 ರಲ್ಲಿ 2 ಬಾರಿ ಶಾಸಕರಾಗಿದ್ದ ವಿಜಯಶಂಕರ್‌ ಅವರು ಮೈಸೂರು ಕ್ಷೇತ್ರದಿಂದ 2004 ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರನ್ನು ಮಣಿಸಿ 12 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 
2010 ರಿಂದ 2016 ರವರೆಗೆ ವಿಧಾನಪರಿಷತ್‌ ಸದಸ್ಯರಾಗಿದ್ದ ವಿಜಯ್ ಶಂಕರ್ ಜಗದೀಶ್‌ ಶೆಟ್ಟರ್‌ ಅವರ ಸಂಪುಟದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ನಿರ್ವಹಿಸಿದ್ದರು. 2009 ರ ಲೋಕಸಭಾ ಚುನಾವಣೆಯಲ್ಲಿ ಎಚ್‌.ವಿಶ್ವನಾಥ್‌ ಅವರ ವಿರುದ್ದ ಸೋಲು ಕಂಡಿದ್ದ ಇವರಿಗೆ 2014 ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಮೈಸೂರು ಕ್ಷೇತ್ರದ ಬದಲಿಗೆ ಹಾಸನದಿಂದ ಟಿಕೆಟ್ ನೀದಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT