ಉಪೇಂದ್ರ 
ರಾಜಕೀಯ

ನಟ ಉಪೇಂದ್ರ ಸಾರಥ್ಯದಲ್ಲಿ ಹೊಸ ಪಕ್ಷ 'ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ' ಉದಯ

ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇತ್ತೀಚೆಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದರಾದರೂ ಇಂದು ತಮ್ಮ ನೂತನ ಪಕ್ಷದ ಅಧಿಕೃತ ಹೆಸರನ್ನು ...

ಬೆಂಗಳೂರು:  ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇತ್ತೀಚೆಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದರಾದರೂ ಇಂದು ತಮ್ಮ ನೂತನ ಪಕ್ಷದ ಅಧಿಕೃತ ಹೆಸರನ್ನು ಘೋಷಿಸಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ  ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ನಟ ಉಪೇಂದ್ರ ಅವರು ತಮ್ಮ ನೂತನ ಪಕ್ಷಕ್ಕೆ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂದು ಹೆಸರಿಟ್ಟಿದ್ದಾರೆ.
ಕುಟುಂಬ ಸಮೇತ ಖಾಕಿ ತೊಟ್ಟು ಉಪೇಂದ್ರ ಆಗಮಿಸಿದ್ದರು, ಎಲ್ಲದರಲ್ಲೂ ಡಿಫರೆಂಟ್ ಚಿಂತನೆ ಮಾಡುವ ಉಪ್ಪಿ ತಮ್ಮ ಪಕ್ಷದ ಹೆಸರು ಘೋಷಣೆಯನ್ನು ವಿಭಿನ್ನವಾಗಿ ಮಾಡಿದ್ದಾರೆ. ವೇದಿಕೆ ಮೇಲೆ ಪತ್ರಕರ್ತರನ್ನು ಕೂರಿಸಿ, ವೇದಿಕೆ ಮುಂಭಾಗ ತಮ್ಮ ಕುಟುಂಬದವರ ಜೊತೆ ಆಸೀನರಾಗಿದ್ದರು.
ಕಲಾವಿದ ವಿಲಾಸ್ ನಾಯಕ್ ಕೆಪಿಜಿಪಿ ಪ್ರತಿಕೃತಿ ರಚಿಸಿದರು. ಪ್ರಜಾಕೀಯ ಆರಂಭಿಸಿದಾಗಿನಿಂದ ಜನರು ಉತ್ತಮವಾಗಿ ನನ್ನನ್ನು ಬೆಂಬಲಿಸಿದ್ದಾರೆ. ರಾಜಕೀಯ ಎಂಬು ಕಾನ್ಸೆಪ್ಟ್ ಬದಲಾಯಿಸುವುದು ನಮ್ಮ ಉದ್ದೇಶ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆ ಅಗತ್ಯವಿದೆ, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂದು ಪಕ್ಷ ಘೋಷಣೆ ನಂತರ ಉಪೇಂದ್ರ ಹೇಳಿದ್ದಾರೆ.
ಇನ್ನೂ ಕಾರ್ಯಕ್ರಮಕ್ಕೆ ಉಪೇಂದ್ರ, ಸಂಬಂಧಿಗಳು, ಸ್ನೇಹಿತರು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT